ADVERTISEMENT

ಮನೆ ಬಾಗಿಲು ಮುರಿದು ಕಳ್ಳತನ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 16:33 IST
Last Updated 24 ನವೆಂಬರ್ 2021, 16:33 IST

ಬೆಂಗಳೂರು: ಸೋಂಪುರ ಹೋಬಳಿಯ ಕಂಬಾಳು ಗ್ರಾಮದಲ್ಲಿ ನೆಲೆಸಿದ್ದ ಶಿಕ್ಷಕರೊಬ್ಬರ ಮನೆಯಲ್ಲಿ ಕಳವಾಗಿದ್ದು, ಈ ಸಂಬಂಧದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಶಿಕ್ಷಕ ಜಡಿಯಪ್ಪ ಹಾಗೂ ಅವರ ಪತ್ನಿ ಮನೆಗೆ ಬೀಗ ಹಾಕಿಕೊಂಡು ದೊಡ್ಡಬಳ್ಳಾಪುರದಲ್ಲಿ ನೆಲೆಸಿರುವ ಮಗಳ ಮನೆಗೆ ಹೋಗಿದ್ದರು. ಈ ವೇಳೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿ ಇಟ್ಟಿದ್ದ ₹2 ಲಕ್ಷ ನಗದು ಹಾಗೂ ₹3 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಾಗ್ರಿಗಳನ್ನು ಕದ್ದು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಗಳ ಮನೆಯಿಂದ ಮರಳಿದ್ದ ಜಡಿಯಪ್ಪ ದಂಪತಿ ಬಾಗಿಲು ಒಡೆದಿರುವುದನ್ನು ಕಂಡು ಗಾಬರಿಯಾಗಿದೆ. ಒಳಗೆ ಹೋಗಿ ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಾಗ್ರಿಗಳು ಕಳವಾಗಿರುವುದು ಗೊತ್ತಾಗಿದೆ’ ಎಂದೂ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.