ADVERTISEMENT

ಹೌ ಈಸ್‌ ಮೈ ಬೆಸ್ಟ್‌ ಫ್ರೆಂಡ್: ದೇವೇಗೌಡ, ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಮೋದಿ

ದೇವೇಗೌಡ, ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಮೋದಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 9:07 IST
Last Updated 10 ಜನವರಿ 2019, 9:07 IST
ಬೀದರ್‌ನ ವಾಯುಪಡೆ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಹೂಗುಚ್ಛ ನೀಡಿ ಸ್ವಾಗತಿಸಿದರು.  ಸಚಿವ ರಾಜಶೇಖರ ಪಾಟೀಲ ಇದ್ದಾರೆ
ಬೀದರ್‌ನ ವಾಯುಪಡೆ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಹೂಗುಚ್ಛ ನೀಡಿ ಸ್ವಾಗತಿಸಿದರು.  ಸಚಿವ ರಾಜಶೇಖರ ಪಾಟೀಲ ಇದ್ದಾರೆ   

ಬೀದರ್‌: ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಿಂದ ಸೊಲ್ಲಾಪುರಕ್ಕೆ ತೆರಳುವ ಸಂದರ್ಭದಲ್ಲಿ ಇಲ್ಲಿಯ ವಾಯುಪಡೆ ವಿಮಾನನಿಲ್ದಾಣದಲ್ಲಿ ಸ್ವಾಗತ ಕೋರಿದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಅವರ ಬಳಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

ಬುಧವಾರ ವಿಮಾನದಿಂದ ಇಳಿದ ತಕ್ಷಣವೇ ಸಚಿವ ಬಂಡೆಪ್ಪ ಕಾಶೆಂಪೂರ ಅವರು ‘ನಾನು ದೇವೇಗೌಡರ ಪಕ್ಷದ ಬಂಡೆಪ್ಪ’ ಎಂದು ಪರಿಚಯಿಸಿಕೊಂಡು ಪುಷ್ಪಗುಚ್ಛ ನೀಡಿದರು.

‘ದೇವೇಗೌಡರು ಕ್ಷೇಮವಾಗಿದ್ದಾರೆಯೇ? ಹೌ ಈಸ್‌ ಮೈ ಬೆಸ್ಟ್‌ ಫ್ರೆಂಡ್ (ಕುಮಾರಸ್ವಾಮಿ)’ ಎಂದು ಮೋದಿ ಅವರು ಬಂಡೆಪ್ಪ ಅವರಲ್ಲಿ ವಿಚಾರಿಸಿದರು. ‘ಇಬ್ಬರೂ ಕ್ಷೇಮವಾಗಿದ್ದಾರೆ’ ಎಂದು ಬಂಡೆಪ್ಪ ಉತ್ತರಿಸಿದರು.

ನಂತರ ಸಚಿವರಾದ ರಾಜಶೇಖರ ಪಾಟೀಲ, ರಹೀಂ ಖಾನ್‌, ಸಂಸದ ಭಗವಂತ ಖೂಬಾ, ಶಾಸಕ ಪ್ರಭು ಚವಾಣ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ನಗರಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ADVERTISEMENT

ಪ್ರಧಾನಿ ಮಧ್ಯಾಹ್ನ ಸೊಲ್ಲಾಪುರದಿಂದ ಮರಳಿ ಹೆಲಿಕಾಪ್ಟರ್‌ನಲ್ಲಿ ಬೀದರ್‌ಗೆ ಬಂದು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.