ADVERTISEMENT

ಮೂರುಸಾವಿರ ಮಠ ಮುಂದುವರಿದ ಸಭೆ ಗೊಂದಲ

ಸಬೆ ನಡೆಸಿಯೇ ತೀರುತ್ತೇವೆ; ನಡೆಸಲು ಬಿಡುವುದಿಲ್ಲ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 21:46 IST
Last Updated 21 ಫೆಬ್ರುವರಿ 2020, 21:46 IST

ಹುಬ್ಬಳ್ಳಿ: ಮೂರುಸಾವಿರ ಮಠದ ಆವರಣದಲ್ಲಿ ಫೆ.23 ರಂದು ಕರೆದಿರುವ ಸತ್ಯ ದರ್ಶನ ಸಭೆಯನ್ನು ನಡೆಸಿಯೇ ತೀರುವುದಾಗಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದರೆ, ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಮಠದ ಉನ್ನತ ಸಮಿತಿ ಸಂಚಾಲಕ ಮೋಹನ ಲಿಂಬಿಕಾಯಿ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲೇಹೂಸೂರಿನ ದಿಂಗಾಲೇಶ್ವರ ಸ್ವಾಮೀಜಿ, ‘ಸಭೆ ನಡೆಸುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಭೆ ತಡೆದರೆ ಅಹಿತಕರ ಘಟನೆಗೆ ಕಾರಣ ಆಗಬಹುದು’ ಎಂದು ಎಚ್ಚರಿಸಿದರು.

‘ಮೂರುಸಾವಿರ ಮಠದ ಉತ್ತರಾಧಿಕಾರಿ ವಿವಾದ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಮಾತನಾಡಿದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಸಭೆಗೆ ನನಗೆ ಆಹ್ವಾನ ನೀಡಿಲ್ಲ’ ಎಂದು ಮಠದ ಉನ್ನತ ಸಮಿತಿ ಸದಸ್ಯ ಜಗದೀಶ ಶೆಟ್ಟರ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.