ADVERTISEMENT

ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಲು ಹುಬ್ಬಳ್ಳಿ ಜನ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 19:41 IST
Last Updated 7 ಡಿಸೆಂಬರ್ 2021, 19:41 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಕಲಬುರಗಿ: ‘ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಲು ಹುಬ್ಬಳ್ಳಿಯ ಪ್ರತಿಷ್ಠಿತ ಖಾಸಗಿ ಸಾರಿಗೆ ಸಂಸ್ಥೆಯ ನೌಕರರನ್ನು ನಗರಕ್ಕೆ ಕರೆಸಲಾಗಿದೆ. ಅವರನ್ನು ಒಂದು ಹೋಟೆಲ್‌ನಲ್ಲಿ ಉಳಿಸಲಾಗಿದೆ. ಇದನ್ನು ನೋಡಿದರೆ ಸ್ಥಳೀಯ ಬಿಜೆಪಿ ಶಾಸಕರ ಮೇಲೆ ಪಾಟೀಲ ಅವರಿಗೆ ನಂಬಿಕೆ ಇಲ್ಲದಂತಾಗಿದೆ’ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿಯಿಂದ ಬರುವ ಅಗತ್ಯವಾದರೂ ಏನು? ಅವರು ಪ್ರಚಾರಕ್ಕಂತೂ ಬಂದಿಲ್ಲ. ಏನು ಹಂಚಿಕೆ ಮಾಡಲಿದ್ದಾರೆ ಎಂಬುದು ನಿಗೂಢವಾಗಿದೆ. ಆದ್ದರಿಂದ ಈ ಬಗ್ಗೆ ಚುನಾವಣಾಧಿಕಾರಿಗೆ ಲಿಖಿತ ದೂರು ಸಲ್ಲಿಸಲಿದ್ದೇವೆ’ ಎಂದರು. ‘ವೈಯಕ್ತಿಕವಾಗಿ ಬಿ.ಜಿ. ಪಾಟೀಲ ಅವರ ಬಗ್ಗೆ ಗೌರವವಿದೆ. ಆದರೆ, ಅವರು ತಮ್ಮ ಅವಧಿಯಲ್ಲಿ ಪಂಚಾಯಿತಿ ಸದಸ್ಯರ ಪರವಾಗಿ ಏನು ಕೆಲಸ ಮಾಡಿದ್ದಾರೆ’ ಎಂದೂ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT