ADVERTISEMENT

ಹುಬ್ಬಳ್ಳಿ ಗಲಭೆ: ಪೊಲೀಸ್ ಭದ್ರತೆಯಲ್ಲಿ ಪಿಯುಸಿ ಪರೀಕ್ಷೆಗೆ ಹಾಜರಾದ ಆರೋಪಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 4:39 IST
Last Updated 22 ಏಪ್ರಿಲ್ 2022, 4:39 IST
   

ಹುಬ್ಬಳ್ಳಿ: ಆಕ್ಷೇಪಾರ್ಹ ವಾಟ್ಸ್‌‌ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿ ಅಭಿಷೇಕ ಹಿರೇಮಠನನ್ನು ಪೊಲೀಸರು ಇಲ್ಲಿನ ಉಪ ಕಾರಾಗೃಹದಿಂದ ಶುಕ್ರವಾರ ನಗರದ ಪ್ರಿಯದರ್ಶಿನಿ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಭದ್ರತೆಯಲ್ಲಿ ಕರೆತಂದರು.

ಪರೀಕ್ಷೆ ಬರೆಯಲು ಆರೋಪಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಿಗ್ಗೆ 10.30ರಿಂದ ಪರೀಕ್ಷೆ ಆರಂಭವಾಗಲಿದ್ದು, ಭಾರಿ ಭದ್ರತೆ ನಡುವೆ ಅಭಿಷೇಕ ಪರೀಕ್ಷೆ ಬರೆಯಲಿದ್ದಾನೆ. ಏ. 30ರ ವರೆಗೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗೆ ಪರೀಕ್ಷೆ ಬರೆಯಲು ಕೋರ್ಟ್ ಅನುಮತಿ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.