ADVERTISEMENT

ಭಾರತ್ ಜೋಡೊ ಸಮಾರೋಪಕ್ಕೆ ಗೈರು: ದೇವೇಗೌಡ ಪತ್ರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 19:06 IST
Last Updated 24 ಜನವರಿ 2023, 19:06 IST
   

ಬೆಂಗಳೂರು: ಶ್ರೀನಗರದಲ್ಲಿ ನಡೆಯುವ ಭಾರತ್ ಜೋಡೊ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವ
ಹಿಸಲು ಸಾಧ್ಯವಾಗುತ್ತಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.‌ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆಯ ಸಮಾರೋಪದಲ್ಲಿ ಭಾಗವಹಿಸುವಂತೆ ಆಹ್ವಾನಿಸಿ ಖರ್ಗೆ ಅವರು ದೇವೇಗೌಡರಿಗೆ ಜನವರಿ 10ರಂದು ಪತ್ರ ಬರೆದಿದ್ದರು. ಮಂಗಳವಾರ ಪತ್ರದ ಮೂಲಕ ಉತ್ತರಿಸಿರುವ ಅವರು, ತಾವು ಪಾಲ್ಗೊಳ್ಳುವುದು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ‘ದ್ವೇಷ, ಹಿಂಸೆಯ ವಿರುದ್ಧ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ ಯಾತ್ರೆ ನಡೆಸುತ್ತಿದ್ದಾರೆ. ಸಮಾರೋಪದಲ್ಲಿ ನಾನು ಭಾಗವಹಿಸದೇ ಇದ್ದರೂ, ಅವರ ಯಾತ್ರೆಗೆ ನನ್ನ ಶುಭ ಹಾರೈಕೆ ಇದೆ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT