ADVERTISEMENT

ಅಣ್ಣಾಮಲೈ ಪ್ರತಿಭಟನೆ... ಐ ಡೋಂಟ್‌ ಕೇರ್‌ ಎಂದ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 10:05 IST
Last Updated 5 ಆಗಸ್ಟ್ 2021, 10:05 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರಾಜಕೀಯ ಕಾರಣಕ್ಕಾಗಿ ಪ್ರತಿಭಟನೆ ಮಾಡಬಹುದು. ಅವರನ್ನು ದೊಡ್ಡ ಮನುಷ್ಯನನ್ನಾಗಿ ಮಾಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಪ್ರೀಂಕೋರ್ಟ್‌, ಬೆಂಗಳೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ 6 ಟಿಎಂಸಿಯಷ್ಟು ಹೆಚ್ಚುವರಿ ಹಂಚಿಕೆಮಾಡಿದೆ. ಅದಕ್ಕಾಗಿ ಮೇಕೇದಾಟು ಯೋಜನೆಯನ್ನುಕೈಗೆತ್ತಿಕೊಳ್ಳಲಾಗಿದೆಎಂದುಸುದ್ದಿಗಾರರಿಗೆತಿಳಿಸಿದರು.

ಅಣ್ಣಾಮಲೈಅವರನ್ನು ದೊಡ್ಡ ಮನುಷ್ಯನನ್ನಾಗಿ ಮಾಡಬೇಕಾಗಿಲ್ಲ. ರಾಜಕೀಯ ಕಾರಣಕ್ಕೆಪ್ರತಿಭಟನೆ ಮಾಡುತ್ತಾರೆ. ಪ್ರತಿಭಟನೆ ಮಾಡಿದರೆ, ಐ ಡೋಂಟ್‌ ಕೇರ್‌. ಅನುಮತಿತೆಗೆದುಕೊಂಡು ಮಾಡೇ ತೀರುತ್ತೇವೆ. ತಮಿಳುನಾಡು ಹಿಂದಿನಿಂದಲೂ ಕರ್ನಾಟಕದ ಎಲ್ಲ ಯೋಜನೆಗಳಿಗೂ ಅಡ್ಡಿ ಮಾಡುತ್ತಲೇ ಬಂದಿದೆ ಎಂದು ಬೊಮ್ಮಾಯಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.