ಬೆಳಗಾವಿ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಬಹಳ ಸುಳ್ಳು ಹೇಳುತ್ತಿದ್ದಾರೆ. ಯಾಕೆಂದರೆ ಅವರಿಗೆ ಸತ್ಯ ಗೊತ್ತಿಲ್ಲ. ಏನೇನೋ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ಅವರ ಮಾತುಗಳಿಗೆ ನಾನು ಕಿಮ್ಮತ್ತು ಕೊಡುವುದಿಲ್ಲ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂದು ಬಹಳ ಆಸೆ ಇಟ್ಟುಕೊಂಡಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಅವರ ಪಕ್ಷಕ್ಕೆ ಬಹುಮತ ಇದೆಯೇ? ಇಲ್ಲದ ಮೇಲೆ ಹೇಗೆ ಮುಖ್ಯಮಂತ್ರಿಯಾಗಲು ಸಾಧ್ಯ? ಬಿಳಿದು ಕರಿ ಮಾಡಿ, ಕರಿದು ಬಿಳಿ ಮಾಡಿ ಆಗೋಕೆ ಆಗಲ್ಲ ಎಂದು ವ್ಯಂಗ್ಯವಾಡಿದರು.
ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಪಕ್ಷದಲ್ಲಿ ತಯಾರಿ ನಡೆದಿದೆ. ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ. ಅವರದ್ದೇ ಕ್ಷೇತ್ರವಾದ ಉತ್ತರ ಪ್ರದೇಶದ ಅಮೇಥಿಯಿಂದಲೇ ಸ್ಪರ್ಧಿಸುತ್ತಾರೆ ಎಂದು ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.