ADVERTISEMENT

ಇಂದಿರಾ ಹೆಸರಿನ ಕ್ಯಾಂಟೀನ್‌ಅನ್ನು ವಿರೋಧಿಸಲಾರೆ: ಬಿಜೆಪಿ ಸಂಸದ ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 8:23 IST
Last Updated 15 ಆಗಸ್ಟ್ 2021, 8:23 IST
ಸಂಸದ ಜಿ.ಎಂ. ಸಿದ್ದೇಶ್ವರ 
ಸಂಸದ ಜಿ.ಎಂ. ಸಿದ್ದೇಶ್ವರ    

ದಾವಣಗೆರೆ: ‘ಇಂದಿರಾ ಹೆಸರಿನ ಕ್ಯಾಂಟೀನ್‌ ಅನ್ನು ನಾನು ವಿರೋಧಿಸುವುದಿಲ್ಲ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಇಂದಿರಾ ಗಾಂಧಿ ಪ್ರಧಾನಿಯಾಗಿ ಹತ್ತು ಹದಿನೈದು ವರ್ಷ ಆಡಳಿತ ಮಾಡಿದ್ದಾರೆ. ಅವರು ದೇಶದ ನಾಯಕಿಯಾಗಿದ್ದವರು.ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ ಆಡಳಿತ ಅಲ್ಲಗೆಳೆಯಲು ಆಗುವುದಿಲ್ಲ. ಕ್ಯಾಂಟೀನ್ ಹೆಸರು ಕುರಿತು ರಾಜ್ಯ ಸರ್ಕಾರ ತೀರ್ಮಾನಿಸಲಿದೆ’ ಎಂದರು.

ಮೇಕೆದಾಟು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಯಾರೇ ಪ್ರತಿಭಟನೆ ಮಾಡಲಿ ಮೇಕೆದಾಟು ಮಾಡಿಯೇ ತಿರುತ್ತೇವೆ. ಈಗಾಗಲೇ ಮುಖ್ಯಮಂತ್ರಿಯವರು ಈ ಬಗ್ಗೆ ನಿರ್ಧಾರ ಮಾಡಿದ್ದಾರೆ.ಯಾರಿಗೂ ಜಗ್ಗುವ ಬಗ್ಗುವ ಮಾತಿಲ್ಲ’ ಎಂದು ಎಚ್ಚರಿಸಿದರು.

ADVERTISEMENT

‘ಈ ವಿಚಾರವಾಗಿ ಸಿ.ಟಿ.ರವಿ ಏನು ಹೇಳಿದ್ದಾರೋ ಗೊತ್ತಿಲ್ಲ. ನಮ್ಮ ನಾಡಿನ ರಕ್ಷಣೆ ನಮ್ಮ ಹೊಣೆ. ಹೀಗಾಗಿ ಮೇಕೆದಾಟು ಯೋಜನೆ ಮಾಡಿಯೇ ಮಾಡುತ್ತೇವೆ’ ಎಂದರು.

‘ಹುಕ್ಕಾ ಬಾರ್ ಬಗ್ಗೆ ನನಗೆ ಏನೂಂತ ಗೊತ್ತಿಲ್ಲ’ ಎಂದು ಸಿದ್ದೇಶ್ವರ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.