ADVERTISEMENT

ಬಿಜೆಪಿ, ಕಾಂಗ್ರೆಸ್‌ನಿಂದ ಆಹ್ವಾನ: ಸುಮಲತಾ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 20:48 IST
Last Updated 1 ಮಾರ್ಚ್ 2023, 20:48 IST
ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಸದೆ ಸುಮಲತಾ ಸುದ್ದಿಗಾರರ ಜೊತೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ವಿವೇಕಾನಂದ, ನಾಗೇಶ್ ಇದ್ದರು
ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಸದೆ ಸುಮಲತಾ ಸುದ್ದಿಗಾರರ ಜೊತೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ವಿವೇಕಾನಂದ, ನಾಗೇಶ್ ಇದ್ದರು   

ಮದ್ದೂರು: ‘ರಾಜ್ಯ ರಾಜಕಾರಣಕ್ಕೆ ಬರುವಂತೆ ಬಿಜೆಪಿ, ಕಾಂಗ್ರೆಸ್ ಆಹ್ವಾನಿಸಿದ್ದು, ನನ್ನ ಕಾರ್ಯ ಕರ್ತರ ಅಭಿಪ್ರಾಯ ಪಡೆದ ಬಳಿಕ ನಿರ್ಧರಿಸುವೆ’ ಎಂದು ಸಂಸದೆ ಸುಮಲತಾ ಅಂಬರೀಷ್ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಎಷ್ಟು ದಿನಗಳಿವೆ ಎಂಬುದ ಕ್ಕಿಂತಲೂ ಎಷ್ಟು ಅನುಕೂಲ ಕರ ವಾತಾವರಣವಿದೆ ಎಂಬುದು ಮುಖ್ಯ. ರಾಜ್ಯ ರಾಜಕಾರಣಕ್ಕೆ ಬರುವ ಮಾತನಾಡಲು ಇನ್ನೂ ಸಮಯ ಬಂದಿಲ್ಲ’ ಎಂದರು.

‘ದಶಪಥ ಹೆದ್ದಾರಿ ಉದ್ಘಾ ಟನೆ ಕಾರ್ಯಕ್ರಮದಲ್ಲಿ ಸಂಸದೆ ಯಾಗಿ ಭಾಗವಹಿಸುತ್ತೇನೆ ಅಷ್ಟೇ. ಜಿಲ್ಲೆಗೆ ವಿಶೇಷ ಅನುದಾನ ನೀಡುವಂತೆ ಪ್ರಧಾನಿಗೆ ಮನವಿ ಮಾಡುವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.