ADVERTISEMENT

ಹಣ ತಗೊಂಡಿದ್ರೆ ಟಿಕೆಟ್‌ ಕೊಡ್ತಿದ್ರಾ?: ಮಹೇಶ ಕುಮಠಳ್ಳಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 12:13 IST
Last Updated 20 ನವೆಂಬರ್ 2019, 12:13 IST
ಮಹೇಶ ಕುಮಠಳ್ಳಿ
ಮಹೇಶ ಕುಮಠಳ್ಳಿ   

ಅಥಣಿ (ಬೆಳಗಾವಿ ಜಿಲ್ಲೆ): ‘ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಯಾರಿಂದಲೂ ಹಣ ಪಡೆದಿಲ್ಲ. ಯಾವುದೇ ಆಮಿಷಕ್ಕೂ ಒಳಗಾಗಿಲ್ಲ. ಹಣ ತೆಗೆದುಕೊಂಡಿದ್ದರೆ ನನಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಸಿಗುತ್ತಿತ್ತೇ?’ ಎಂದು ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಕೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹಣ ಪಡೆದಿದ್ದರೆ ನಾನಿಲ್ಲಿ ಅಭ್ಯರ್ಥಿಯೇ ಆಗುತ್ತಿರಲಿಲ್ಲ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಮ್ಮ ಟಿಕೆಟ್‌ ನನಗೆ ಬಿಟ್ಟುಕೊಟ್ಟಿದ್ದಾರೆ. ನಾನು ಹಿಂದಿನಿಂದಲೂ ಜನರ ಪರವಾಗಿ ಮಾಡುತ್ತಿರುವ ಹೋರಾಟಕ್ಕೆ ಗೌರವ ಕೊಟ್ಟು ಪ್ರೀತಿ, ವಿಶ್ವಾಸದಿಂದ ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ, ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು.

‘ಪ್ರಚಾರಕ್ಕೆ ಸಮಯ ಸಾಲುತ್ತಿಲ್ಲ. ಹೀಗಾಗಿ, ಬೇರೆ ಕ್ಷೇತ್ರ ಅಥವಾ ಇತರ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ವಿರೋಧಿಗಳು ಮಾಡುತ್ತಿರುವ ಅಪಪ್ರಚಾರದಿಂದ, ಹರಡುತ್ತಿರುವ ಸುಳ್ಳು ಸಂದೇಶಗಳಿಂದ ಮಾನಸಿಕವಾಗಿ ನೋವಾಗುತ್ತಿದೆ. ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಜನರು ಅವುಗಳಿಗೆ ಕಿವಿಕೊಡಬಾರದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.