ADVERTISEMENT

ಆರ್‌ಎಸ್ಎಸ್‌ ಹೊಗಳಿದ್ದೆ ಎಂಬುದು ಅಪ್ಪಟ ಸುಳ್ಳು: ಎಚ್‌.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 10:35 IST
Last Updated 8 ಅಕ್ಟೋಬರ್ 2021, 10:35 IST
ಎಚ್‌.ಡಿ. ದೇವೇಗೌಡ
ಎಚ್‌.ಡಿ. ದೇವೇಗೌಡ   

ಬೆಂಗಳೂರು: ‘ಆರ್‌ಎಸ್‌ಎಸ್‌ ಅನ್ನು ನಾನು ಹೊಗಳಿದ್ದೆ ಎಂಬುದು ಅಪ್ಪಟ ಸುಳ್ಳು’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದರು.

ಜೆಡಿಎಸ್‌ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು. ನನಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧವಿದೆ? ಅದರ ಗಂಧ ಗಾಳಿ ನನಗೆ ಗೊತ್ತಿಲ್ಲ’ ಎಂದರು.

‘ಎಲ್‌.ಕೆ.ಅಡ್ವಾಣಿ ಅವರು ಬೆಂಗಳೂರಿಗೆ ಬಂದಿದ್ದಾಗ ನನ್ನ ಅಧ್ಯಕ್ಷತೆಯಲ್ಲೇ ಸಮಾಲೋಚನಾ ಸಭೆ ನಡೆದಿತ್ತು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲುವಾಸ ಅನುಭವಿಸಿದ ಕುರಿತು ಆ ಸಭೆಯಲ್ಲಿ ಮಾತನಾಡಿದ್ದೆವು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸಭೆ ನಡೆಸಲು ನಾನೇ ಅನುಮತಿ ನೀಡಿದ್ದೆ. ನನ್ನ ಅಧ್ಯಕ್ಷತೆಯಲ್ಲೇ ಆ ಸಭೆ ನಡೆದಿತ್ತು. ಸಭೆಯನ್ನು ದುರುಪಯೋಗ ಮಾಡುವುದು ಸರಿಯಲ್ಲ ಎಂದು ನಾನೇ ಹೇಳಿದ್ದೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.