ADVERTISEMENT

ಮತ್ತೆ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಬಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 22:38 IST
Last Updated 3 ನವೆಂಬರ್ 2022, 22:38 IST
ಬಿ.ಸಿ. ಪಾಟೀಲ
ಬಿ.ಸಿ. ಪಾಟೀಲ   

ಬೆಂಗಳೂರು: ‘ಒಡೆದು ಹೋದ ಹಾಲು, ಮನಸ್ಸು ಮತ್ತೆ ಒಂದಾಗಲು ಸಾಧ್ಯವೇ ಇಲ್ಲ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಪಕ್ಷ ತ್ಯಜಿಸಿದವರೂ ಸೇರಿದಂತೆ ಎಲ್ಲ
ರಿಗೂ ಕಾಂಗ್ರೆಸ್‌ ಸೇರಲು ಡಿ.ಕೆ. ಶಿವ
ಕುಮಾರ್‌ ಆಹ್ವಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಂತಹ ಜರೂ
ರತ್ತು ಇಲ್ಲ. ಈಗಾಗಲೇ ವಿಚ್ಛೇದನ ಪಡೆದು ಬಂದಾಗಿದೆ. ಮತ್ತೆ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ’ ಎಂದರು.

‘ಕಾಂಗ್ರೆಸ್‌ಗೆ ಹಳೆ ಗಂಡನ ಪಾದವೇ
ಗತಿ ಎಂಬಂತೆ ಕರೆಯುತ್ತಿದ್ದಾರೆ. ಇಲ್ಲಿ (ಬಿಜೆಪಿ) ನಾವು ಚೆನ್ನಾಗಿದ್ದೇವೆ. ವಿಧಾನ
ಸಭೆಯಲ್ಲಿ ಸಿದ್ದರಾಮಯ್ಯ ವೀರಾವೇಶ ದಿಂದ ಮಾತನಾಡಿರುವುದನ್ನು ಕೇಳಿ
ದ್ದೇವೆ. ಅದಾದ ಮೇಲೂ ನಾವು ಯಾಕೆ ಹೋಗುತ್ತೇವೆ’ ಎಂದು ತಿರುಗೇಟು ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.