ADVERTISEMENT

ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಭೂ ಮಾಪನಾ ಇಲಾಖೆಗೆ ಹರ್ಷ ಗುಪ್ತ ಆಯುಕ್ತ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 1:18 IST
Last Updated 19 ಜೂನ್ 2020, 1:18 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಆರು ಐಎಎಸ್‌ ಹಾಗೂ ಒಬ್ಬರು ಐಎಫ್‌ಎಸ್‌ ಅಧಿಕಾರಿಯನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಎನ್‌.ನಾಗಾಂಬಿಕೆ ದೇವಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್‌ ಅವರನ್ನು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಸ್ಥಾನ ನಿರೀಕ್ಷೆಯಲ್ಲಿದ್ದ ಎನ್‌.ಜಯರಾಮ್‌ ಅವರನ್ನು ಜಲಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

ಹರ್ಷ ಗುಪ್ತ: ಭೂಮಾಪನಾ ಇಲಾಖೆಯ ಆಯುಕ್ತ. ಜತೆಗೆ ಐಎಂಎ ವಿಶೇಷ ಅಧಿಕಾರಿಯಾಗಿಯೂ ಮುಂದುವರಿಕೆ. ಎಚ್‌.ಬಸವರಾಜೇಂದ್ರ– ಪಶುಸಂಗೋಪನಾ ಇಲಾಖೆಯ ಆಯುಕ್ತ, ಡಾ.ಎನ್‌.ಶಿವಶಂಕರ್‌– ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹೆಚ್ಚುವರಿಯಾಗಿ ಗಣಿ ಇಲಾಖೆಯ ನಿರ್ದೇಶಕ. ಐಎಫ್‌ಎಸ್‌ ಅಧಿಕಾರಿ ಡಾ.ಎಸ್‌.ಎರ್‌.ನಟೇಶ್‌– ಆನೆ ಯೋಜನೆಯ ನಿರ್ದೇಶಕ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.