ADVERTISEMENT

ಐಎಎಸ್‌ ಅಧಿಕಾರಿಗಳ ವರ್ಗ: ರೋಹಿಣಿ ಸಿಂಧೂರಿ ಮೈಸೂರಿನ ಹೊಸ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 16:46 IST
Last Updated 28 ಸೆಪ್ಟೆಂಬರ್ 2020, 16:46 IST
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ    
""
""

ಬೆಂಗಳೂರು: ವರ್ಗಾವಣೆಯಾಗಿ ತಿಂಗಳು ಕಳೆವ ಮೊದಲೇ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಎತ್ತಂಗಡಿಯಾಗಿದ್ದು, ಅವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆನಿಯೋಜನೆ ಮಾಡಲಾಗಿದೆ.

ಇದರ ಜೊತೆಗೆ ರಾಜೇಂದ್ರ ಚೋಳನ್‌ ಅವರನ್ನು ಬೆಂಗಳೂರು ಸ್ಮಾರ್ಟ್‌ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.ಬಿಬಿಎಂಪಿಯ ಆಸ್ತಿ ವಿಭಾಗದ ವಿಶೇಷ ಆಯುಕ್ತರಾಗಿರುವ ಜೆ. ಮಂಜುನಾಥ್‌ ಅವರನ್ನು ಬಿಬಿಎಂಪಿಯ ಆಡಳಿತ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಬೆಂಗಳೂರು ಸ್ಮಾರ್ಟ್‌ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಲ್ಲಿದ್ದ ಹೆಪ್ಸಿಬಾ ರಾಣಿ ಕೊರ್ಲಪತಿ ಅವರನ್ನು ಮುಂದಿನ ಆದೇಶದ ವರೆಗೆ ಬಿಬಿಎಂಪಿಯ ಆಸ್ತಿ ವಿಭಾಗದ ವಿಶೇಷ ಆಯುಕ್ತರಾಗಿ ನಿಯೋಜಿತರಾಗಿದ್ದಾರೆ.

ADVERTISEMENT

ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಂ. ಆರ್‌ ರವಿ ಕುಮಾರ್‌ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಿಸಲಾಗಿದೆ.

ಪಿ ಶಿವಶಂಕರ್

ಪಂಚಾಯತ್‌ ರಾಜ್‌ ಇಲಾಖೆಯ ನಿರ್ದೇಶಕ ಪಿ ಶಿವಶಂಕರ್‌ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.