ADVERTISEMENT

ಐಎಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 21:37 IST
Last Updated 6 ಫೆಬ್ರುವರಿ 2023, 21:37 IST
   

ಬೆಂಗಳೂರು: ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಫೌಜಿಯಾ ಬಿ. ತರುನ್ನಮ್‌ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಭನ್ವಾರ್‌ ಸಿಂಗ್‌ ಮೀನಾ ಅವರನ್ನು ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರ ನ್ನಾಗಿ ನಿಯೋಜಿಸಲಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಪರಿಹಾರ, ಪುನರ್ವಸತಿ ಮತ್ತು ಭೂಸ್ವಾಧೀನದ ಪ್ರಧಾನ ವ್ಯವಸ್ಥಾಪಕ ರಾಹುಲ್ ರತ್ನಂ ಪಾಂಡೆ ಅವರನ್ನು ಕೊಪ್ಪಳ ಜಿಲ್ಲೆಯ ನೂತನ ಸಿಇಒ ಆಗಿ ನೇಮಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.