ADVERTISEMENT

ಐಎಫ್‌ಎಸ್ ಅಧಿಕಾರಿಗಳ ವರ್ಗ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 19:48 IST
Last Updated 16 ಅಕ್ಟೋಬರ್ 2019, 19:48 IST

ಬೆಂಗಳೂರು: ಪಶುಸಂಗೋಪನಾ ಇಲಾಖೆ ಆಯುಕ್ತ ಐಎಫ್‌ಎಸ್ ಅಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಅವರನ್ನು ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಅರಣ್ಯ ಪರಿಸರ (ತಾಂತ್ರಿಕ) ವಿಭಾಗದ ವಿಶೇಷ ನಿರ್ದೇಶಕರಾಗಿ ಎಸ್. ವೆಂಕಟೇಶನ್, ಪಶುಸಂಗೋಪನಾ ಇಲಾಖೆ ಆಯುಕ್ತರಾಗಿ ಎಸ್.ಆರ್.ನಟೇಶ್ ಅವರನ್ನು ವರ್ಗಾಯಿಸಲಾಗಿದೆ.

ಕೆಎಎಸ್: ಕೆ.ಎನ್.ಅನುರಾಧಾ ಅವರನ್ನು ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ (ಭೂಸ್ವಾಧೀನ), ಎಸ್.ರಂಗಪ್ಪ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ, ಸಿ.ಎನ್.ಶ್ರೀಧರ ಅವರನ್ನು ‘ಸೆಸ್ಕ್’ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.