ವಿಜಯಪುರ: ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುನಿಂದ ಕೆಲಸ ಮಾಡುತ್ತಿದೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕೂಡ ಎರಡು ದಿನಗಳ ಹಿಂದೆ ಪರಿಶೀಲನೆ ನಡೆಸಿದ್ದೇನೆ. ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಕ್ರಮಕೈಗೊಳ್ಳಲಾಗಿದ್ದು, ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.