ಬೆಂಗಳೂರು: ಐಎಂಎ ಸಮೂಹ ಕಂಪನಿಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರಚಾರ ಮಾಡುತ್ತಿದ್ದ ನಾಲ್ವರು ಪ್ರವರ್ತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರನ್ನು ಮೋಹಿದ್ ಇದ್ರೀಸ್, ಫೌಜುಲ್ಲ , ಶದಾಬ್ ಖಾನ್, ಇರ್ಷಾನ್ ಖಾನ್ ಎಂದು ಹೇಳಲಾಗಿದೆ.
ಅವರ ಮನೆ ಮೇಲೂ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಐಎಂ ಎ ಕಂಪನಿಯಲ್ಲಿ ಹಣ ಹೂಡಿಕೆ ಮಾಡುವಂತೆ ಜನರನ್ನು ಈನಾಲ್ವರು ಮನವೋಲಿಸುತ್ತಿದ್ದರು. ಅದಕ್ಕೆ ಮನ್ಸೂರ್ ಖಾನನಿಂದ ಕಮಿಷನ್ ಪಡೆಯುತ್ತಿದ್ದರು ಎಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.