ADVERTISEMENT

ವಲಸಿಗರ ಪರಿಶೀಲನೆ: ಸ್ಪಷ್ಟನೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 19:47 IST
Last Updated 26 ಜನವರಿ 2020, 19:47 IST
   

ಮಡಿಕೇರಿ: ವಲಸೆ ಕಾರ್ಮಿಕರ ದಾಖಲೆಗಳ ಪರಿಶೀಲನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾರ್ಮಿಕ ಇಲಾಖೆಯು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ. ಪನ್ನೇಕರ್‌ ಅವರಿಂದ ಸ್ಪಷ್ಟನೆ ಕೇಳಿದೆ.

‘ಯಾವ ಕಾನೂನಿನಡಿ ಕಾರ್ಮಿಕರ ದಾಖಲೆ ಪರಿಶೀಲಿಸಲಾಗಿದೆ. ದಿಢೀರ್‌ ಪರಿಶೀಲನೆಗೆ ಕಾರಣವೇನು ಎಂಬುದರ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ಕೋರಲಾಗಿದೆ. ಎಸ್‌ಪಿ ಅವರಿಗೆ ನೋಟಿಸ್‌ ನೀಡಿಲ್ಲ' ಎಂದು ಇಲಾಖೆ ಮೂಲಗಳು ತಿಳಿಸಿವೆ.

‘ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದ ನುಸುಳುಕೋರರು ಕೊಡಗಿನಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂಬ ಆರೋಪದ ಮೇರೆಗೆ ಜ. 23ರಂದು ಪರಿಶೀಲನಾ ಆಂದೋಲನ ನಡೆದಿತ್ತು. ಹೊರ ರಾಜ್ಯದ ಕಾರ್ಮಿಕರ ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌ಗಳ ಪರಿಶೀಲನೆ ನಡೆದಿತ್ತು. ಹೊರ ರಾಜ್ಯದ ಕಾರ್ಮಿಕರ ದಾಖಲೆ ಪರಿಶೀಲಿಸುವ ಮೂಲಕ ಅವರ ಹಕ್ಕು ಕಸಿದುಕೊಳ್ಳಲಾಗಿದೆ ಎಂದು ಹಲವು ಕಾರ್ಮಿಕ ಸಂಘಟನೆಗಳು ಆಕ್ಷೇಪಿಸಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.