ADVERTISEMENT

ಫೆಬ್ರುವರಿಯಲ್ಲಿ ತಾ.ಪಂ., ಜಿ.ಪಂ. ಚುನಾವಣೆ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 19:45 IST
Last Updated 27 ನವೆಂಬರ್ 2021, 19:45 IST
ಕೆ.ಎಸ್‌. ಈಶ್ವರಪ್ಪ
ಕೆ.ಎಸ್‌. ಈಶ್ವರಪ್ಪ   

ದಾವಣಗೆರೆ: ‘ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆಗೆ ಈಗಾಗಲೇ ಸಮಿತಿ ರಚಿಸಲಾಗಿದ್ದು, ಆ ಸಮಿತಿ ಜನವರಿಯಲ್ಲಿ ವರದಿ ಸಲ್ಲಿಸಲಿದೆ. ಫೆಬ್ರುವರಿಯಲ್ಲಿ ಚುನಾವಣೆ ನಡೆಯಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್‌ ತಮ್ಮ ಪಕ್ಷಕ್ಕೆ ಸಂಬಂಧವೇ ಇಲ್ಲದವರನ್ನು ಕಣಕ್ಕಿಳಿಸಿದೆ. ಕೇವಲ ಕೋಟ್ಯಧಿಪತಿ ಎಂಬ ಕಾರಣಕ್ಕೆ ಹಲವು ಕಡೆಗಳಲ್ಲಿ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ’ ಎಂದು ತಿಳಿಸಿದರು.

‘ಜೆಡಿಎಸ್‌ ಅಭ್ಯರ್ಥಿಗಳು ಇಲ್ಲದ ಕಡೆಗಳಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂದು ಕೊನೇ ಕ್ಷಣದಲ್ಲಿ ನಿರ್ಧರಿಸಲಾಗುವುದು ಎಂದು ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಾಂಗ್ರೆಸ್‌ ಅನ್ನು ವಿರೋಧಿಸಿಕೊಂಡೇ ಬಂದ ಪಕ್ಷ ಜೆಡಿಎಸ್‌. ಹಾಗಾಗಿ ಬಿಜೆಪಿಗೆ ಬೆಂಬಲ ನೀಡಬೇಕು ಎಂಬುದು ನನ್ನ ಅಭಿಪ್ರಾಯ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.