ADVERTISEMENT

ಶಿಕ್ಷಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಕಡಿತವಾಗಿದ್ದ ತೆರಿಗೆ ವಾಪಸ್‌

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 15:30 IST
Last Updated 13 ಅಕ್ಟೋಬರ್ 2022, 15:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಶಿಕ್ಷಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಕಡಿತವಾಗಿದ್ದ ₹14 ಕೋಟಿ ತೆರಿಗೆ ಹಣವನ್ನು ಆದಾಯ ತೆರಿಗೆ ಇಲಾಖೆ ಬಡ್ಡಿ ಸಹಿತ ಮರಳಿಸಿದೆ.

ಕ್ಷೇಮಾಭಿವೃದ್ಧಿ ನಿಧಿ ಸಂಗ್ರಹದಲ್ಲಿದ್ದ ₹ 150 ಕೋಟಿಯಲ್ಲಿ ತೆರಿಗೆ ಹಣವನ್ನು ಆದಾಯ ತೆರಿಗೆ ಇಲಾಖೆ ಪಡೆದುಕೊಂಡಿತ್ತು. ಈ ಹಣ ವಿದ್ಯಾರ್ಥಿ ಹಾಗೂ ಶಿಕ್ಷಕರಿಂದಲೇ ಸಂಗ್ರಹಿಸಿದ್ದ ಹಣವಾದ ಕಾರಣ, ಅದು ಆದಾಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಶಿಕ್ಷಣ ಇಲಾಖೆ ಕೋರ್ಟ್‌ ಮೆಟ್ಟಿಲೇರಿತ್ತು. ಕೋರ್ಟ್ ಬಡ್ಡಿ ಸೇರಿಸಿ, ₹ 18.50 ಕೋಟಿ ಮರಳಿಸಲು ಆದೇಶ ನೀಡಿತ್ತು.

ಈ ಹಣವೂ ಸೇರಿದಂತೆ ಖಾತೆಯಲ್ಲಿ ₹ 31 ಕೋಟಿ ಇದ್ದು, ಶಿಕ್ಷಕರು, ವಿದ್ಯಾರ್ಥಿಗಳಿಗೆ ಖರ್ಚು ಮಾಡಲು ಕ್ರಿಯಾ ಯೋಜನೆ ರೂಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ವಿಶಾಲ್‌ ಸೂಚಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.