ADVERTISEMENT

ಆದಾಯ ತೆರಿಗೆ ಇಲಾಖೆಯಿಂದ ಡಿ.ಕೆ.ಶಿವಕುಮಾರ್‌ಗೆ ಶೋಕಾಸ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2019, 6:22 IST
Last Updated 2 ಡಿಸೆಂಬರ್ 2019, 6:22 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಕಾಂಗ್ರೆಸ್ ಶಾಸಕ ಡಿ. ಕೆ. ಶಿವಕುಮಾರ್​ ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಶೋಕಾಸ್​ ನೋಟಿಸ್​ ಜಾರಿ ಮಾಡಿದೆ.

ತೆರಿಗೆ ವಂಚನೆ‌ಗೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

ಖುದ್ದು ಹಾಜರಾಗಬೇಕು ಅಥವಾ ತಮ್ಮ ಪರವಾಗಿ ಸಂಬಂಧಪಟ್ಟವರು ವಿಚಾರಣೆಗೆ ಹಾಜರಾಗಿ ಉತ್ತರ ನೀಡಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.

ADVERTISEMENT

ತೆರಿಗೆ ವಂಚನೆ ಸಂಬಂಧಿಸಿದಂತೆ ದಂಡ ವಿಧಿಸುವ ಕುರಿತು ಈ ನೋಟಿಸ್​ ಜಾರಿ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆ ಕಾಯ್ದೆಯ ಸೆಕ್ಷನ್​ 271(1)ಬಿ ರ ಪ್ರಕಾರ ಈ ನೋಟಿಸ್ ಜಾರಿ ಮಾಡಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.