ಬೆಂಗಳೂರು: ತಮ್ಮ ವರ್ಗಾವಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿ. ರೂಪಾ ಅವರು ಟ್ವೀಟ್ ಮಾಡಿದ್ದಾರೆ.
‘ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನನ್ನನ್ನು ವರ್ಗಾವಣೆ ಮಾಡಲಾಗಿದೆ. ಹೇಮಂತ್ ನಿಂಬಾಳ್ಕರ್ ವಿರುದ್ಧ ದೋಷಾರೋಪ ಸಲ್ಲಿಸಿದ್ದ ಸಿಬಿಐ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಳೆದ ಡಿಸೆಂಬರ್ನಲ್ಲೇ (1 ವರ್ಷ ಆಯಿತು) ಶಿಫಾರಸು ಮಾಡಿದೆ. ಅಷ್ಟಾದರೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ. ಇದೀಗ ನನ್ನನ್ನೂ ಹಾಗೂ ದೋಷಾರೋಪ ಪಟ್ಟಿ ಎದುರಿಸುತ್ತಿರುವ ಅಧಿಕಾರಿಯನ್ನು ಒಂದೇ ತಕ್ಕಡಿಯಲ್ಲಿ ಅಳೆಯಲಾಗುತ್ತಿದೆ’ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ರಾಜೀನಾಮೆ ಹಿಂಪಡೆದಿದ್ದ ರವೀಂದ್ರನಾಥ್ಗೆ ಬಡ್ತಿ
ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಜೊತೆಯಲ್ಲೇ ಮತ್ತಷ್ಟು ಐಪಿಎಸ್ ಅಧಿಕಾರಿಗಳನ್ನು ಗುರುವಾರ ವರ್ಗಾವಣೆ ಮಾಡಲಾಗಿದೆ. ಇನ್ನು 37 ಐಪಿಎಸ್ ಅಧಿಕಾರಿಗಳಿಗೆ ಬಡ್ತಿಯನ್ನೂ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.