ಬೆಂಗಳೂರು:ಇಂದಿರಾ ಕ್ಯಾಂಟೀನ್ ಮುಚ್ಚುವ ಯಾವುದೇ ಪ್ರಯತ್ನ ಇಲ್ಲ ಎಂದು ಉಪ ಮುಖ್ಯಮಂತ್ರಿಅಶ್ವತ್ಥ ನಾರಾಯಣಬುಧವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾಧ್ಯಮಗಳಲ್ಲಿಇಂದಿರಾ ಕ್ಯಾಂಟೀನ್ನ ಅವ್ಯವಹಾರಗಳ ಬಗ್ಗೆ ವರದಿಯಾಗಿದ್ದು ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹಾಗೇಕ್ಯಾಂಟೀನಿನಲ್ಲಿ ನಡೆಯುತ್ತಿರುವ ಅಕ್ರಮ, ಆಹಾರದ ಗುಣಮಟ್ಟದ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಮುಚ್ಚಲು ಮುಂದಾದರೆ ಗಂಭೀರ ಪರಿಣಾಮ: ಸಿದ್ದರಾಮಯ್ಯ ಎಚ್ಚರಿಕೆ
ಇಂದಿರಾ ಕ್ಯಾಂಟೀನ್ ಮುಚ್ಚುವ ಯಾವುದೇ ದುರುದ್ದೇಶ ನಮ್ಮಲ್ಲಿ ಇಲ್ಲ, ಬದಲಾಗಿಇಂದಿರಾ ಕ್ಯಾಂಟೀನಿನ ಅವ್ಯವಸ್ಥೆಯನ್ನು ಸರಿಪಡಿಸುತ್ತೇವೆ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.