ADVERTISEMENT

ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಯತ್ನ ಇಲ್ಲ: ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 6:13 IST
Last Updated 28 ಆಗಸ್ಟ್ 2019, 6:13 IST
   

ಬೆಂಗಳೂರು:ಇಂದಿರಾ ಕ್ಯಾಂಟೀನ್ ಮುಚ್ಚುವ ಯಾವುದೇ ಪ್ರಯತ್ನ ಇಲ್ಲ ಎಂದು ಉಪ ಮುಖ್ಯಮಂತ್ರಿಅಶ್ವತ್ಥ ನಾರಾಯಣಬುಧವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾಧ್ಯಮಗಳಲ್ಲಿಇಂದಿರಾ ಕ್ಯಾಂಟೀನ್‌ನ ಅವ್ಯವಹಾರಗಳ ಬಗ್ಗೆ ವರದಿಯಾಗಿದ್ದು ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹಾಗೇಕ್ಯಾಂಟೀನಿನಲ್ಲಿ ನಡೆಯುತ್ತಿರುವ ಅಕ್ರಮ, ಆಹಾರದ ಗುಣಮಟ್ಟದ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಇಂದಿರಾ ಕ್ಯಾಂಟೀನ್ ಮುಚ್ಚುವ ಯಾವುದೇ ದುರುದ್ದೇಶ ನಮ್ಮಲ್ಲಿ ಇಲ್ಲ, ಬದಲಾಗಿಇಂದಿರಾ ಕ್ಯಾಂಟೀನಿನ ಅವ್ಯವಸ್ಥೆಯನ್ನು ಸರಿಪಡಿಸುತ್ತೇವೆ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.