ADVERTISEMENT

ಶಿವರಾಜ್‌ ಕುಮಾರ್ ಕನ್ನಡಪರ ಹೋರಾಟದ ನೇತೃತ್ವ ವಹಿಸಲಿ: ಇಂದ್ರಜಿತ್‌ ಲಂಕೇಶ್

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2021, 8:44 IST
Last Updated 19 ಡಿಸೆಂಬರ್ 2021, 8:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ‘ಕನ್ನಡ ಭಾಷೆಯ ವಿಚಾರದಲ್ಲಿ ಸಿನಿಮಾ ನಟರು ಕೇವಲ ಟ್ವೀಟ್ ಮಾಡಿ ಸುಮ್ಮನಾಗಬಾರದು. ನಟ ಶಿವರಾಜ್ ಕುಮಾರ್ ನೇತೃತ್ವ ವಹಿಸಿ ಬೀದಿಗಿಳಿದು ಹೋರಾಟ‌‌ ನಡೆಸಬೇಕು’ ಎಂದು ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.

‘ಸಿನಿಮಾದವರು ಬೆಳಗಾವಿಗೆ ಹೋಗಿ ಹೋರಾಟಕ್ಕೆ ಬೆಂಬಲ‌ ನೀಡಬೇಕು. ಸಿನಿಮಾ ರಂಗದಲ್ಲಿ ನಾಯಕತ್ವದ ಕೊರತೆ ಇದೆ. ಡಾ.ರಾಜ್‌ಕುಮಾರ್, ಅಂಬರೀಶ್ ನಂತರ ನಾಯಕತ್ವ ಇಲ್ಲದಂತಾಗಿದೆ. ಕನ್ನಡ ಹೋರಾಟಕ್ಕೆ ಬನ್ನಿ ಎಂದು ಕರೆಯಬೇಕಾದ ದುಸ್ಥಿತಿ ಎದುರಾಗಿದೆ. ಸಿನಿಮಾ ರಂಗಕ್ಕೆ ಉತ್ತಮ ನಾಯಕತ್ವದ ಅವಶ್ಯವಿದ್ದು, ಶಿವರಾಜ್ ಕುಮಾರ್ ನಾಯಕತ್ವ ವಹಿಸಿಕೊಳ್ಳಬೇಕು’ ಎಂದು ಭಾನುವಾರ ಇಲ್ಲಿ ತಿಳಿಸಿದರು.



‘ಗೋಕಾಕ್ ಚಳುವಳಿಗೆ ಡಾ.ರಾಜ್‌ಕುಮಾರ್‌ ಅವರನ್ನು ಕರೆ ತಂದಿದ್ದು ನಮ್ಮ ತಂದೆ ಲಂಕೇಶ್. ಡಾ.ರಾಜ್ ಅನುಮತಿ ಇಲ್ಲದೆಯೇ ‘ಗೋಕಾಕ್ ಹೋರಾಟಕ್ಕೆ ರಾಜ್’ ಎಂಬ ಲೇಖನ ಬರೆದಿದ್ದರು. ನಂತರ ಡಾ.ರಾಜ್ ಹೋರಾಟಕ್ಕೆ ಬಂದಿದ್ದರು’ ಎಂದರು.

ADVERTISEMENT

ಡಬ್ಬಿಂಗ್ ವಿರೋಧಿ: ‘ಇತ್ತೀಚಿನ ದಿನಗಳಲ್ಲಿ ಬೇರೆ ಭಾಷೆಯ ಸಿನಿಮಾಗಳು ಕನ್ನಡಕ್ಕೆ ಡಬ್ಬಿಂಗ್ ಆಗುತ್ತಿವೆ. ಇದರಿಂದ ಕನ್ನಡದವರು ಡಬ್ಬಿಂಗ್ ಕಲಾವಿದರಾಗಿ ಆಗಿ ಉಳಿಯಲಿದ್ದಾರೆ. ಸಿನಿಮಾ ಡಬ್ಬಿಂಗ್ ವಿಚಾರವಾಗಿಯೂ ಹೋರಾಟ ಆಗಬೇಕಿದೆ. ಕನ್ನಡ ಭಾಷೆಯ ಉಳಿವಿಗಾಗಿ ಬೀದಿಗೀಳಿದು ಹೋರಾಟ ಮಾಡಬೇಕಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.