ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ ಅವರನ್ನು ಸರ್ಕಾರ ನೇಮಕ ಮಾಡಿದೆ.
ಎಸ್.ಎಂ. ಸೋಮಶೇಖರ ಮತ್ತು ಕೆ.ಪಿ. ಮಂಜುನಾಥ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಶ್ರೀನಿವಾಸ ಅವರು ಈ ಮೊದಲು ಕಾನೂನು ಇಲಾಖೆ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮುನ್ನ ಹಾಸನ, ಮಂಡ್ಯ ಜಿಲ್ಲಾ ನ್ಯಾಯಾಲಯ ಸೇರಿ ಹಲವೆಡೆ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದಾರೆ.
ಸೋಮಶೇಖರ್ ಅವರು ನಿವೃತ್ತ ಐಎಫ್ಎಸ್ ಅಧಿಕಾರಿಯಾಗಿದ್ದು, ಮಂಜುನಾಥ್ ಅವರು ಶಿಕಾರಿಪುರದ ವಕೀಲರು ಎಂದು ಮಾಹಿತಿ ಆಯೋಗದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.