ADVERTISEMENT

ಮುಖ್ಯ ಮಾಹಿತಿ ಆಯುಕ್ತರಾಗಿ ಎನ್‌.ಸಿ. ಶ್ರೀನಿವಾಸ ನೇಮಕ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2019, 2:12 IST
Last Updated 24 ಮಾರ್ಚ್ 2019, 2:12 IST
ಶ್ರೀನಿವಾಸ
ಶ್ರೀನಿವಾಸ   

ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ ಅವರನ್ನು ಸರ್ಕಾರ ನೇಮಕ ಮಾಡಿದೆ.

ಎಸ್.ಎಂ. ಸೋಮಶೇಖರ ಮತ್ತು ಕೆ.ಪಿ. ಮಂಜುನಾಥ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಶ್ರೀನಿವಾಸ ಅವರು ಈ ಮೊದಲು ಕಾನೂನು ಇಲಾಖೆ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮುನ್ನ ಹಾಸನ, ಮಂಡ್ಯ ಜಿಲ್ಲಾ ನ್ಯಾಯಾಲಯ ಸೇರಿ ಹಲವೆಡೆ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದಾರೆ.

ADVERTISEMENT

ಸೋಮಶೇಖರ್ ಅವರು ನಿವೃತ್ತ ಐಎಫ್‌ಎಸ್ ಅಧಿಕಾರಿಯಾಗಿದ್ದು, ಮಂಜುನಾಥ್ ಅವರು ಶಿಕಾರಿಪುರದ ವಕೀಲರು ಎಂದು ಮಾಹಿತಿ ಆಯೋಗದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.