ADVERTISEMENT

ಗಂಟಲಿಗೆ ಗಾಯ: ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 19:49 IST
Last Updated 24 ಜನವರಿ 2021, 19:49 IST
ಶ್ರೀರಾಂಪುರ ಹೋಬಳಿಯ ಕಡವಗೆರೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಮೃತಪಟ್ಟಿರುವುದು
ಶ್ರೀರಾಂಪುರ ಹೋಬಳಿಯ ಕಡವಗೆರೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಮೃತಪಟ್ಟಿರುವುದು   

ಶ್ರೀರಾಂಪುರ: ಸಮೀಪದ ಕಡವಿಗೆರೆ ಅರಣ್ಯ ಪ್ರದೇಶದಲ್ಲಿಗಂಟಲಿಗೆ ಗಾಯ ಮಾಡಿಕೊಂಡು ಆಹಾರ ಸೇವಿಸದೆ ನಿತ್ರಾಣಗೊಂಡು ಚಿರತೆಯೊಂದು ಭಾನುವಾರ ಮೃತಪಟ್ಟಿದೆ.

ಈ ಕುರಿತು ಮಾಹಿತಿ ನೀಡಿದ ಅರಣ್ಯಾಧಿಕಾರಿ ಸುಜಾತಾ, ‘ಚಿರತೆ ಸುಮಾರು ಒಂದೂವರೆ ವರ್ಷದ್ದಾಗಿದೆ. ಕಾಡಿನಲ್ಲಿ ಒಣಗಿದ ಮರದ ಕಟ್ಟಿಗೆಯಿಂದ ಗಂಟಲಿಗೆ ಗಾಯಮಾಡಿಕೊಂಡಿರುವ ಸಾಧ್ಯತೆ ಇದೆ. ನೋವಿನಿಂದ ಆಹಾರ ಸೇವಿಸಲಾಗದೆ ನಿತ್ರಾಣಗೊಂಡು ಮೃತಪಟ್ಟಿದೆ. ಸಿಬ್ಬಂದಿ ಚಿರತೆ ಮಲಗಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಚಿರತೆ ಸೆರೆಗೆ ಬಲೆ ಬೀಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ’ ಎಂದು ತಿಳಿಸಿದರು.

ಚಿರತೆಯ ಶವವನ್ನು ಹೊಸದುರ್ಗಕ್ಕೆ ತೆಗೆದುಕೊಂಡು ಹೋಗಿ ಅಂತಿಮ ವಿಧಿ ನೆರವೇರಿಸಲಾಯಿತು.

ADVERTISEMENT

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲಕಂಠಪ್ಪ, ಉಪ ವಲಯ ಅರಣ್ಯಾಧಿಕಾರಿ ಯೋಗೇಶ್, ವನಪಾಲಕ ಹರೀಶ್ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.