ADVERTISEMENT

ಐಎನ್‌ಎಸ್‌ ಹಡಗಿನ ಚಿತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 3 ಮೇ 2019, 20:24 IST
Last Updated 3 ಮೇ 2019, 20:24 IST
ಪ್ರಮೋದ್ ಮಧ್ವರಾಜ್ ಬಿಡುಗಡೆ ಮಾಡಿರುವ ಐಎನ್‌ಎಸ್‌ ಕೊಚ್ಚಿನ್‌ ಹಡಗಿಗೆ ಹಾನಿಯಾಗಿದೆ ಎನ್ನಲಾದ ಚಿತ್ರ
ಪ್ರಮೋದ್ ಮಧ್ವರಾಜ್ ಬಿಡುಗಡೆ ಮಾಡಿರುವ ಐಎನ್‌ಎಸ್‌ ಕೊಚ್ಚಿನ್‌ ಹಡಗಿಗೆ ಹಾನಿಯಾಗಿದೆ ಎನ್ನಲಾದ ಚಿತ್ರ   

ಉಡುಪಿ: ‘ಸುವರ್ಣ ತ್ರಿಭುಜ ಬೋಟ್‌ ದುರಂತಕ್ಕೆ ಹಾಗೂ ಮೀನುಗಾರರ ಸಾವಿಗೆ ಕಾರಣವಾದ ನೌಕಾದಳದ ಬೃಹತ್ ಯುದ್ಧನೌಕೆ ಐಎನ್‌ಎಸ್‌ ಕೊಚ್ಚಿನ್‌ ಹಡಗಿನ ತಳಭಾಗಕ್ಕೆ ಹಾನಿಯಾಗಿರುವ ಚಿತ್ರ ಲಭ್ಯವಾಗಿದೆ’ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಾಕಿದ್ದಾರೆ.‌

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಕ್ಷಣ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಲೋಕಸಭಾ ಚುನಾವಣೆಗೂ ಮೊದಲೇ ಬೋಟ್‌ ಅವಘಡದ ಮಾಹಿತಿ ಸಿಕ್ಕಿದ್ದರೂ ರಕ್ಷಣಾ ಇಲಾಖೆ ಹಾಗೂ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಮರೆಮಾಚುವ ಪ್ರಯತ್ನ ಮಾಡಿದ್ದಾರೆ’ ಎಂದು ಪ್ರಮೋದ್ ಟೀಕಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.