ADVERTISEMENT

International Yoga Day 2023: ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಯೋಗಾಭ್ಯಾಸ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2023, 7:41 IST
Last Updated 21 ಜೂನ್ 2023, 7:41 IST
   
9ನೇ ವಿಶ್ವ ಯೋಗ ದಿನದ ಅಂಗವಾಗಿ ಇಂದು ಮುಂಜಾನೆಯಿಂದಲೇ ರಾಜ್ಯದಾದ್ಯಂತ ಯೋಗಾಭ್ಯಾಸ ಕಾರ್ಯಕ್ರಮ ಹಾಗೂ ಯೋಗ ಶಿಬಿರಗಳು ನಡೆದವು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ‌ಹಾಗೂ ಜಿಲ್ಲಾ ಆಯುಷ್‌ ಇಲಾಖೆ ವತಿಯಿಂದ ಯೋಗ ದಿನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಒಳಾಂಗಣಗಳಲ್ಲಿ ಯೋಗ ದಿನದ ಆಚರಣೆಗಳು ನಡೆದವು.

ರಾಜ್ಯದಲ್ಲಿ ಯೋಗ ದಿನದ ಸಂಭ್ರಮ

9ನೇ ವಿಶ್ವ ಯೋಗ ದಿನದ ಅಂಗವಾಗಿ ಇಂದು ಮುಂಜಾನೆಯಿಂದಲೇ ರಾಜ್ಯದಾದ್ಯಂತ ಯೋಗಾಭ್ಯಾಸ ಕಾರ್ಯಕ್ರಮ ಹಾಗೂ ಯೋಗ ಶಿಬಿರಗಳು ನಡೆದವು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ‌ಹಾಗೂ ಜಿಲ್ಲಾ ಆಯುಷ್‌ ಇಲಾಖೆ ವತಿಯಿಂದ ಯೋಗ ದಿನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಒಳಾಂಗಣಗಳಲ್ಲಿ ಯೋಗ ದಿನದ ಆಚರಣೆಗಳು ನಡೆದವು.

ವಿಶ್ವ ಯೋಗ ದಿನದ ಪ್ರಯುಕ್ತ ವಿಜಯನಗರ ಜಿಲ್ಲಾಡಳಿತ ವತಿಯಿಂದ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಗುರುವಾರ ಬೆಳಿಗ್ಹೆ ಇಲ್ಲಿನ ಪುನೀತ್ ರಾಜ್ ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಶಿಬಿರ ನಡೆಯಿತು.

ಸಂಸದ ವೈ.ದೇವೇಂದ್ರಪ್ಪ ಅವರು ಗಿಡಕ್ಕೆ ನೀರೆರೆಯುವ ಮೂಲಕ ಯೋಗ ಶಿಬಿರ ಉದ್ಘಾಟಿಸಿದರು. ಶಾಸಕ ಎಚ್. ಆರ್. ಗವಿಯಪ್ಪ, ಹೆಚ್ವುವರಿ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು, ಬಿ ಇದ್ದರು. ಬಳಿಕ ನೂರಾರು ಮಂದಿ ಯೋಗ ಮಾಡಿದರು.

ಮೈಸೂರು ಅರಮನೆ ಮುಂದೆ ಯೋಗಾಭ್ಯಾಸ

ಮೈಸೂರು ಅರಮನೆ ಆವರಣದಲ್ಲಿ ಬುಧವಾರ 9ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಸಾವಿರಾರು ಮಂದಿ ಯೋಗಾಭ್ಯಾಸ ಮಾಡಿದರು. ಬೆಳಿಗ್ಗೆ 7.25ಕ್ಕೆ ಆರಂಭಗೊಂಡು ಸುಮಾರು 45 ನಿಮಿಷಗಳ‌ ಕಾಲ ಯೋಗಗುರುಗಳ ನೇತೃತ್ವದಲ್ಲಿ ವಿವಿಧ ಆಸನಗಳನ್ನು ಅಭ್ಯಾಸಿಸಲಾಯಿತು.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಯೋಗ ದಿನಾಚರಣೆ

ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಬುಧವಾರ ಬೆಳಿಗ್ಗೆ ಆಯುಷ್ ಇಲಾಖೆ ಮತ್ತು ಜಿಲ್ಲಾ ಆಡಳಿತದಿಂದ ವಿಶ್ವ ಯೋಗ ದಿನದ ದಿನ ಪ್ರಯುಕ್ತ ಯೋಗ ಶಿಬಿರ ಆಯೋಜಿಸಲಾಗಿತ್ತು.

ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ ಶಿಬಿರ ಉದ್ಘಾಟಿಸಿದರು.

ಮನುಷ್ಯನ ಜೀವನದಲ್ಲಿ ಆರೋಗ್ಯ ತುಂಬಾ ಮುಖ್ಯ. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಅತ್ಯಂತ. ಹಣ- ಅಂತಸ್ತು ಇದ್ದವರು ಶ್ರೀಮಂತರಲ್ಲ, ದೈಹಿಕ, ಮಾನಸಿಕ ಆರೋಗ್ಯ ಇದ್ದವರು ನಿಜವಾದ ಶ್ರೀಮಂತರು.
– ಸಿದ್ಧಲಿಂಗ ಸ್ವಾಮೀಜಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಯೋಗ

ಜಿಮಖಾನಾ ಮೈದಾ‌ನದಲ್ಲಿ ಏರ್ಪಡಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಮಹೇಶ ತೆಂಗಿನಕಾಯಿ
ಹುಬ್ಬಳ್ಳಿಯಲ್ಲಿ ಸಾರ್ವಜನಿಕರಿಂದ ಯೋಗಾಭ್ಯಾ

ಹುಬ್ಬಳ್ಳಿ: ನಗರದ ಕರ್ನಾಟಕ ಜಿಮಖಾನಾ ಮೈದಾನ, ಇಂದಿರಾ ಗಾಜಿನಮನೆ ಸೇರಿದಂತೆ ವಿವಿಧೆಡೆ ಅಂತರರಾಷ್ಟ್ರೀಯ ಯೋಗ ದಿನ‌ ಆಚರಿಸಲಾಯಿತು.

ಕ್ಷಮತಾ ಸೇವಾ ಸಂಸ್ಥೆ ಹಾಗೂ ಧನ್ಯೊಸ್ಮಿ ಯೋಗ ಕೇಂದ್ರದಿಂದ ಜಿಮಖಾನಾ ಮೈದಾ‌ನದಲ್ಲಿ ಏರ್ಪಡಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಮಹೇಶ ತೆಂಗಿನಕಾಯಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.

ಸಾರ್ವಜನಿಕರು ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದರು.

ರಾಮನಗರದಲ್ಲಿ ಯೋಗ ದಿನಾಚರಣೆ

ರಾಮನಗರ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಬುಧವಾರ 9ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಯೋಗಾಸ್ತರು ಸಾಮೂಹಿಕ ಯೋಗಾಭ್ಯಾಸ ಮಾಡಿದರು.

ಚಿಕ್ಕಬಳ್ಳಾಪುರ: ಯೋಗ ದಿನಾಚರಣೆಗೆ ಉಸ್ತುವಾರಿ ಸಚಿವ ಎಂ. ಸಿ ಸುಧಾಕರ್‌ ಚಾಲನೆ

ಚಿಕ್ಕಬಳ್ಳಾಪುರ: ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸಿ. ಸುಧಾಕರ್ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

ಯೋಗ ಅಭ್ಯಾಸ ಮಾಡುವ ಮೂಲಕ ಸಚಿವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯೋಗ ತರಬೇತುದಾರರಾದ ನಾಗರಾಜ್, ಲೋಕನಾಥ್, ಎಂ. ರವಿ, ಗೋವಿಂದ್,ಮಹೇಶ್, ರಾಮಚಂದ್ರ ರೆಡ್ಡಿ, ವೀಣಾ ಲೋಕನಾಥ್, ಸುಧಾ ನಾಗರಾಜ್ ಅವರು ಆಸನಗಳನ್ನು ಹೇಳಿಕೊಟ್ಟರು.

ಮಂಗಳೂರಿನ ‍ಪುರಭವನದಲ್ಲಿ ಸಂಸದ, ಶಾಸಕರಿಂದ ಯೋಗ

ಮಂಗಳೂರು: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಪುರಭವನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ‌ ಪಂಚಾಯಿತಿ, ಆಯುಷ್ ಇಲಾಖೆ ಆಯೋಜಿರುವ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.‌ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಡಿಎಚ್ ಒ ಡಾ.‌ಕಿಶೋರ್ ಕುಮಾರ್, ಆಯುಷ್ ಅಧಿಕಾರಿ ಡಾ. ಇಕ್ಬಾಲ್ ಅಹಮ್ಮದ್ ಭಾಗವಹಿಸಿದರು.

ಬೀದರ್: ಸಚಿವ ಖೂಬಾ, ರಹೀಂ ಖಾನ್ ಅವರಿಂದ ಯೋಗ

ಬೀದರ್: ನಗರದ ನೆಹರೂ ಕ್ರೀಡಾಂಗಣದಲ್ಲಿ ಬುಧವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ‌ ಖಾನ್, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಪಂ ಸಿಇಒ ಶಿಲ್ಪಾ ಎಂ., ಎಸ್ಪಿ ಚನ್ನಬಸವಣ್ಣ ಎಸ್.ಎಲ್. ಅವರು ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ಮಾಡಿದರು. ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಯೋಗದಿಂದ ನನಗೆ ಉಪಯೋಗ ಆಗಿದೆ: ಯೋಗ ದಿನದ ಶುಭಾಶಯ ತಿಳಿಸಿದ ಎಚ್‌.ಡಿ ದೇವೇಗೌಡ

ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯೋಗ

ಚಿಕ್ಕಮಗಳೂರಿನಲ್ಲಿ ಆಯುಷ್ ಇಲಾಖೆ ಏರ್ಪಡಿಸಿದ್ದ ಸಾಮೂಹಿಕ ಯೋಗಾಭ್ಯಾಸದಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಯೋಗ ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು

ಗುಮ್ಮಟ ನಗರಿಯಲ್ಲಿ ಯೋಗ ಸಂಭ್ರಮ

ಯೋಗ ದಿನಾಚರಣೆಯಲ್ಲಿ ಭಾಗಿಯಾದ ಮಹಿಳೆಯರು

ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬುಧವಾರ ಮುಂಜಾನೆ ಜಿಲ್ಲಾಡಳಿತದಿಂದ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಸಂಸದ ರಮೇಶ ಜಿಗಜಿಣಗಿ, ಅಧಿಕಾರಿಗಳು ಭಾಗಿಯಾಗಿದ್ದರು.

ತುಳಸಿ ಸಸಿಗೆ ನೀರೆರೆಯೋ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದ ಜಿಗಜಿಣಗಿ ಚಾಲನೆ ನೀಡಿದರು.

ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡು ಯೋಗಾಶನ ಪ್ರದರ್ಶಿಸಿದರು.

ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ಸಚಿವ ರಾಜನಾಥ್‌ ಸಿಂಗ್ ಯೋಗಾಭ್ಯಾಸ

ಕೊಚ್ಚಿ: ದೇಶಿಯವಾಗಿ ನಿರ್ಮಿಸಲಾಗಿರುವ ಭಾರತದ ಮೊದಲ ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಯೋಗಾಭ್ಯಾಸ ಮಾಡಿದರು.

ರಾಯಚೂರಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ

ರಾಯಚೂರಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಮಾಡಿದರು

ಕಾರಂಜಿ ಮಠದ ಪೀಠಾಧಿಪತಿ ಗುರುಸಿದ್ಧ ಸ್ವಾಮೀಜಿ ಯೋಗ

ಬೆಳಗಾವಿಯ ಕಾರಂಜಿ ಮಠದಲ್ಲಿ ಬುಧವಾರ ಪೀಠಾಧಿಪತಿ ಗುರುಸಿದ್ಧ ಸ್ವಾಮೀಜಿ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಪ್ರದರ್ಶನ ನೀಡಿದರು

ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಯೋಗಾಭ್ಯಾಸ

ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರು ಯೋಗಭ್ಯಾಸ ನಡೆಸಿದರು.

ಸೂರತ್‌ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಯಿಂದ ಯೋಗ

ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಈಜುಕೊಳ ಹತ್ತಿರದ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಸಾವಿರಾರು ಯೋಗಪಟುಗಳು ಯೋಗಾಭ್ಯಾಸ‌ ನಡೆಸಿದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.