
ಪ್ರಜಾವಾಣಿ ವಾರ್ತೆ
ಶಿರಸಿ: ಸಂಸದೀಯ ಮೌಲ್ಯಗಳ ಕುಸಿತ ತಡೆಯಲು ಫೆ.24 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 'ಹಿರಿಯ ಸಂಸದೀಯ ಪಟುಗಳು, ಅನುಭವಿ ರಾಜಕೀಯ ಮುಖಂಡರು, ಕಾನೂನು ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದರು.
'ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿದು ಸದನದ ಘನತೆ ಹೆಚ್ಚಿಸುವ ಸಲುವಾಗಿದೇಶದಲ್ಲೇ ಮೊದಲ ಬಾರಿಗೆ ಇಂತಹ ಸಭೆ ನಡೆಯುತ್ತಿದೆ' ಎಂದರು.
'ಸದನದಲ್ಲಿ ವಿಷಯಗಳ ಚರ್ಚೆ ಕುರಿತು ಗಂಭೀರತೆ ಕಡಿಮೆ ಆಗುತ್ತಿದೆ. ರಾಜಕೀಯ ಚಟುವಟಿಕೆಯೇ ಪ್ರಾಮುಖ್ಯತೆ ಪಡೆಯುತ್ತಿದೆ. ಇದನ್ನೆಲ್ಲ ತಡೆಗಟ್ಟಲು ಅಗತ್ಯ ಸಲಹೆಗಳನ್ನು ಸಭೆಯಲ್ಲಿ ನೀಡಲಾಗುವುದು' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.