ADVERTISEMENT

ಶಾರಿಕ್‌ ಚೇತರಿಕೆ ನಂತರ ತನಿಖೆ ತೀವ್ರ: ಆರಗ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 18:54 IST
Last Updated 28 ನವೆಂಬರ್ 2022, 18:54 IST
   

ಶಿವಮೊಗ್ಗ: ಮಂಗಳೂರಿನಲ್ಲಿ ಆಟೊದಲ್ಲಿ ಕುಕ್ಕರ್‌ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್‌ ಆರೋಗ್ಯ ಸುಧಾರಿಸಿದ ನಂತರ ಆತನ ಹೇಳಿಕೆ ಪಡೆದು ತನಿಖೆ ತೀವ್ರಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಪಿಯ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಇದರ ಆಧಾರದ ಮೇಲೆ ತನಿಖೆ ನಡೆಸಲಾಗುವುದು’ ಎಂದರು.

‘ಮಹಾರಾಷ್ಟ್ರದ 47 ಗ್ರಾಮಗಳು ಕರ್ನಾಟಕ ಸೇರಲು ಬೇಡಿಕೆ ಇಟ್ಟಿದ್ದು, ಕಾನೂನಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಎಡಿಜಿಪಿಗೆ ಸೂಚನೆನೀಡಿ ಗಡಿ ಭಾಗದ ಗ್ರಾಮಗಳಿಗೆ ರಕ್ಷಣೆ ನೀಡಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.