ADVERTISEMENT

ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಮತ್ತೆ ವರ್ಗ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2023, 16:33 IST
Last Updated 30 ಸೆಪ್ಟೆಂಬರ್ 2023, 16:33 IST
ರವಿ ಡಿ. ಚನ್ನಣ್ಣನವರ್
ರವಿ ಡಿ. ಚನ್ನಣ್ಣನವರ್   

ಬೆಂಗಳೂರು: ಇತ್ತೀಚೆಗಷ್ಟೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ  ರವಿ ಡಿ. ಚನ್ನಣ್ಣನವರ್ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಜಯರಾಮ್ ರಾಯಪುರ ಅವರನ್ನು ಕಾರವಾರದಲ್ಲಿರುವ ಕರ್ನಾಟಕ ಬಂದರು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನಿಯೋಜಿಸಲಾಗಿದೆ.

ಜನನ–ಮರಣ ವಿಭಾಗದ ನೋಂದಣಾಧಿಕಾರಿಯೂ ಆಗಿರುವ ಹೆಚ್ಚುವರಿ ನಿರ್ದೇಶಕ ಎಂ. ಮಾದೇಶು ಅವರಿಗೆ ಬಡ್ತಿ ನೀಡಿ, ಎನ್‌. ಮಾಧುರಾಂ ಅವರ ನಿವೃತ್ತಿಯಿಂದ ತೆರವಾದ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ನಿರ್ದೇಶಕ ಹುದ್ದೆಗೆ ನೇಮಿಸಲಾಗಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.