ADVERTISEMENT

ರೋಹಿಣಿ ನೈತಿಕತೆ ಪತನ: ಈಜುಕೊಳ ನಿರ್ಮಾಣದ ಬಗ್ಗೆ ಐಪಿಎಸ್‌ ಅಧಿಕಾರಿ ರೂಪಾ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜೂನ್ 2021, 3:06 IST
Last Updated 24 ಜೂನ್ 2021, 3:06 IST
ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ. ರೂಪಾ
ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ. ರೂಪಾ    

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಮಾಡಿದ ವಿವಾದದ ಹಿನ್ನೆಲೆಯಲ್ಲಿ ಐಪಿಎಸ್‌ ಅಧಿಕಾರ ರೂಪಾ ಮೌದ್ಗಿಲ್‌ ಅವರು ಬುಧವಾರ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಟೀಕೆ ಮಾಡಿದ್ದಾರೆ.

ಈ ಕುರಿತು ಬುಧವಾರ ಟ್ವೀಟ್‌ ಮಾಡಿರುವ ಅವರು, ‘ಕೊರೊನಾ ಸಂಕಷ್ಟದಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಸಾರ್ವಜನಿಕರ ಹಣ ಬಳಸಿ ಈಜುಕೊಳ ನಿರ್ಮಿಸಲು ಮುಂದಾಗಿದ್ದು, ಐಐಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನೈತಿಕ ಪತನವನ್ನು ತೋರಿಸುತ್ತದೆ. ಈಜುಕೊಳ ನಿರ್ಮಾಣ ಕೆಲಸ ಮುಂದೂಡಬಹುದಿತ್ತು’ ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ತಮ್ಮ ಫೇಸ್‌ಬುಕ್‌ ಹಾಗೂ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಈಜುಕೊಳ ನಿರ್ಮಾಣಕ್ಕೆ ಕೋವಿಡ್‌ ಹಣ ಬಳಸಿಲ್ಲ ಎಂದು ರೋಹಿಣಿ ಸಿಂಧೂರಿ ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕೋವಿಡ್‌ ಸಂಕಷ್ಟದ ಸಮಯದಲ್ಲಿ ಈಜುಕೊಳ ನಿರ್ಮಾಣ ಕೆಲಸ ಆಗಿಲ್ಲ. 2020ರ ಡಿಸೆಂಬರ್‌ನಲ್ಲಿ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆ ಅವಧಿಯಲ್ಲಿ ಕೋವಿಡ್‌ ಎರಡನೇ ಅಲೆಯ ಯಾವುದೇ ಮುನ್ಸೂಚನೆ ಇರಲಿಲ್ಲ’ ಎಂದು ಮಾಧ್ಯಮಗಳ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.