ADVERTISEMENT

ಮುಖ್ಯಮಂತ್ರಿ ವಿಮಾನದಲ್ಲಿ ಓಡಾಡುವುದು ಐಷಾರಾಮಿಯೇ? ಚೆಲುವರಾಯಸ್ವಾಮಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 9:33 IST
Last Updated 22 ಡಿಸೆಂಬರ್ 2023, 9:33 IST
ಚೆಲುವರಾಯಸ್ವಾಮಿ
ಚೆಲುವರಾಯಸ್ವಾಮಿ   

ಮಂಡ್ಯ: ಸಮಯ ಉಳಿತಾಯಕ್ಕಾಗಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಮಾನದಲ್ಲಿ ಓಡಾಡಿದರೆ ಅದು ಐಷಾರಾಮಿಯೇ? ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಪ್ರಶ್ನಿಸಿದರು.

ಕೆಆರ್‌ಎಸ್‌ ಜಲಾಶಯದ ಬಳಿ ಶುಕ್ರವಾರ ಕಾವೇರಿ ಸಲಹಾ ಸಮಿತಿ ಸಭೆ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. 'ದೆಹಲಿಯಲ್ಲಿ ಸಿದ್ದರಾಮಯ್ಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದರೆ ಹೊರತು ಐಷಾರಾಮಿ ಹೋಟೆಲ್‌ನಲ್ಲಿ ಅಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ವಿಮಾನದಲ್ಲಿ ಓಡಾಡಿರಲಿಲ್ಲವೇ' ಎಂದು ಪ್ರಶ್ನಿಸಿದರು.

ಬಿಜೆಪಿಗೆ ಮಾತನಾಡಲು ಏನೂ ವಿಷಯಗಳಿಲ್ಲ. ಹೀಗಾಗಿ ಹತಾಶೆಯಿಂದ ಈ ರೀತಿ ಟೀಕೆ‌ ಮಾಡುತ್ತಿದೆ ಎಂದರು.

ADVERTISEMENT

ಕುಮಾರಸ್ವಾಮಿ ಹಾಗೂ‌ ಮೋದಿ ಇಬ್ಬರಲ್ಲಿ ಯಾರಿಗೆ ಯಾರು ಅನಿವಾರ್ಯ ಎಂಬುದು ಚುನಾವಣೆ ನಂತರ ಗೊತ್ತಾಗಲಿದೆ. ಬಿಜೆಪಿಯವರು ಜೆಡಿಎಸ್‌ಗೆ 28 ಕ್ಷೇತ್ರಗಳನ್ನೂ ಬಿಟ್ಟುಕೊಡಲಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.