ADVERTISEMENT

ಐಟಿ, ಕಾಲ್ ಸೆಂಟರ್‌ ಆರಂಭ

​ಪ್ರಜಾವಾಣಿ ವಾರ್ತೆ
Published 4 ಮೇ 2020, 19:42 IST
Last Updated 4 ಮೇ 2020, 19:42 IST

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ಕಂಟೈನ್‌ಮೆಂಟ್‌‌ ವಲಯ ಬಿಟ್ಟು ಉಳಿದೆಡೆ ಐಟಿ, ಐಟಿಎಸ್, ಕಾಲ್‌ ಸೆಂಟರ್‌, ಟೆಲಿ ಕಮ್ಯುನಿಕೇಷನ್‌, ಇಂಟರ್‌ನೆಟ್‌ ಸೇವೆ, ಇಂಕ್ಯುಬೇಟರ್‌ ಕೈಗಾರಿಕೆಗಳು ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾಗಿದೆ.

ಆರಂಭಕ್ಕೂ ಮೊದಲು ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ (ಡಿಐಸಿ) ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಸುತ್ತೋಲೆ ಹೊರಡಿಸಿದ್ದಾರೆ. ವೆಬ್‌ಸೈಟ್‌ನಲ್ಲಿ (www.kum.karnataka.gov.in) ‘ಕೋವಿಡ್‌ 19 ಸ್ವಯಂ ಘೋಷಣೆ’ಗೆ ಅವಕಾಶ ಕಲ್ಪಿಸಲಾಗಿದೆ.

ಕೆಂಪು ವಲಯದಲ್ಲಿ ಶೇ 33ರಷ್ಟು ನೌಕರರು ಮಾತ್ರ ಕಚೇರಿಯಲ್ಲಿ ಕೆಲಸ ಮಾಡಲು ಅವಕಾಶ ಇದೆ. ಉಳಿದವರು ಮನೆಯಿಂದ ಕೆಲಸ ಮಾಡಬೇಕು ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.