ADVERTISEMENT

ಸಚಿವ ಸಿಎಸ್‌ ಪುಟ್ಟರಾಜು ನಿವಾಸದಲ್ಲಿ ಐಟಿ ಅಧಿಕಾರಿಗಳ ಶೋಧ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 12:46 IST
Last Updated 11 ಏಪ್ರಿಲ್ 2019, 12:46 IST
   

ಮೈಸೂರು: ಸಚಿವ ಸಿ.ಎಸ್.ಪುಟ್ಟರಾಜು ಅವರ ನಿವಾಸಕ್ಕೆಗುರುವಾರ ಮಧ್ಯಾಹ್ನ ಭೇಟಿ ನೀಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಇಲ್ಲಿನ ಬೃಂದಾವನ ಬಡಾವಣೆಯಲ್ಲಿನ ಸಂಕಲ್ಪ ಅಪಾರ್ಟ್ ಮೆಂಟ್ ನಲ್ಲಿರುವ ಅವರ ನಿವಾಸಕ್ಕೆ ಮಧ್ಯಾಹ್ನ1 ಗಂಟೆ ವೇಳೆಗೆ ಬಂದ15 ಅಧಿಕಾರಿಗಳ ತಂಡ,ಸಂಜೆ 4ರವರೆಗೆ ತಪಾಸಣೆ ನಡೆಸಿತು.

ಚುನಾವಣಾಧಿಕಾರಿಗಳನ್ನು ಜತೆಯಲ್ಲಿ ಕರೆದುಕೊಂಡು ಬಂದಿದ್ದ ಐಟಿ ತಂಡ, ಮೈಸೂರಿನಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಏಪ್ರಿಲ್ 25 ರಂದು ನಡೆಯಲಿರುವಮುಂದಿನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.