ಬೆಂಗಳೂರು:ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ವಿಚಾರಣೆಗಾಗಿ ಆದಾಯ ತೆರಿಗೆ ಕಚೇರಿಗೆ ಹಾಜರಾಗಿದ್ದಾರೆ.
ಸಿದ್ಧಾರ್ಥ ಕಾಲೇಜಿನ ಮೇಲೆ ನಡೆಸಿದ್ದ ಐಟಿ ದಾಳಿ ಸಂಬಂಧ ಅಧಿಕಾರಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಪರಮೇಶ್ವರ್ ಅವರಿಗೆ ತಿಳಿಸಿದ್ದರು. ಅದರಂತೆ ಅವರು ನಗರದ ಕ್ವೀನ್ಸ್ ರಸ್ತೆಯಲ್ಲಿನ ಐಟಿ ಕಚೇರಿಗೆ ಹಾಜರಾಗಿದ್ದಾರೆ.
* ಇದನ್ನೂ ಓದಿ:ಐ.ಟಿ ದಾಳಿ: ₹100 ಕೋಟಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ
ಐಟಿ ದಾಳಿಯಾದ ಎರಡು ದಿನದ ಬಳಿಕ ಸುದ್ದಿಗಾರರೊಟ್ಟಿಗೆ ಮಾತನಾಡಿದ್ದ ಪರಮೇಶ್ವರ್ ಅವರು, ’ಮನೆಯಲ್ಲಿ ಹಣ ಸಿಕ್ಕರೆ ಅದನ್ನು ನಾನು ಮುಚ್ಚಿಡಲು ಆಗಲ್ಲ. ಹಣವಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಆದ್ದರಿಂದ, ಐಟಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ, ಅಂದು ಹಾಜರಾಗುವೆ‘ ಎಂದು ತಿಳಿಸಿದ್ದರು.
ಐಟಿ ದಾಳಿ ನಡೆದ ಬಳಿಕ ಪರಮೇಶ್ವರ ಅವರ ಆಪ್ತ ಸಂತೋಷ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.