ಬೆಳಗಾವಿ: ಜಿಲ್ಲೆಯ ವಿವಿಧೆಡೆ ಇರುವ ಉದ್ಯಮಿಗಳು, ಗುತ್ತಿಗೆದಾರರ ನಿವಾಸದ ಮೇಲೆ ಬುಧವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದರು. ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಸಂಸದ ಪ್ರಕಾಶ ಹುಕ್ಕೇರಿ ಅವರ ಆಪ್ತರಾದ ಚಿಕ್ಕೋಡಿಯ ಇಂದಿರಾ ನಗರದಲ್ಲಿರುವ ಗುತ್ತಿಗೆದಾರ ಪ್ರಕಾಶ ವಂಟಮುತ್ತೆ ಹಾಗೂ ಕಾಗವಾಡ ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ರುದ್ರಗೌಡ ಎಸ್.ಪಾಟೀಲ ಅವರ ನಿವಾಸದ ಮೇಲೆ ದಾಳಿ ನಡೆದಿದೆ.
ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ, ಗೋಕಾಕ ತಾಲ್ಲೂಕಿನ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಅವರ ನಿವಾಸ ಹಾಗೂ ಬಾರ್, ಹೋಟೆಲ್ಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಗದ ಪತ್ರಗಳು, ಲಾಕರ್ ಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ಖಾತೆಗಳ ವಿವರವನ್ನೂ ಪರಿಶೀಲಿಸುತ್ತಿದ್ದಾರೆ. ಬೆಳಿಗ್ಗೆ ಆರಂಭವಾದ ಪರಿಶೀಲನೆ ಸಂಜೆಯ ನಂತರವೂ ಮುಂದುವರಿದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.