ADVERTISEMENT

ಬೆಂಗಳೂರಿನಲ್ಲಿ 20 ಕಡೆ ಮತ್ತೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 6:54 IST
Last Updated 11 ಏಪ್ರಿಲ್ 2019, 6:54 IST
   

ಬೆಂಗಳೂರು: ಮೆಟ್ರೊ ನಗರಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿ ಮುಂದುವರೆದಿದ್ದುಮುಸ್ಲಿಂ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಬೆಳಗ್ಗೆ ಐಟಿ ದಾಳಿ ನಡೆಸಿದ್ದಾರೆ.

ಪ್ರತಿಷ್ಠಿತ ಮುಸ್ಲಿಂ ಉದ್ಯಮಿಗಳಾದ ಅಮಾನುಲ್ಲಾ ಖಾನ್, ಕಮಲ್ ಪಾಷಾ, ನಯೀಜ್ ಖಾನ್ ಮನೆಗಳ ದಾಳಿ ನಡೆಸಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ಐಟಿ ದಾಳಿ ಆರಂಭವಾಗಿದ್ದು ನಗರದ 20ಕ್ಕೂ ಹೆಚ್ಚ ಕಡೆಗಳಲ್ಲಿ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ.

ADVERTISEMENT

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಕಾಗದ ಪತ್ರಗಳನ್ನು ವಶಕ್ಕೆ ಪಡೆದು ತಪಾಸಣೆ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.