ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆರ್. ಪ್ರಭಾಕರ ರೆಡ್ಡಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಬುಧವಾರ ದಾಳಿಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಮೈಲಸಂದ್ರದಲ್ಲಿರುವ ರೆಡ್ಡಿ ಅವರ ಮನೆ, ಕಚೇರಿ, ಕೋಣನಕುಂಟೆ, ದೊಮ್ಮಲೂರು, ಎಚ್ಎಸ್ಆರ್ ಬಡಾವಣೆಗಳಲ್ಲಿರುವ ಅವರ ಆಸ್ತಿಗಳ ಮೇಲೆ ದಾಳಿ ನಡೆದಿದೆ. ಬುಧವಾರ ಬೆಳಿಗ್ಗೆಯೇ ಹಲವು ತಂಡಗಳಲ್ಲಿ ಈ ಸ್ಥಳಗಳ ಮೇಲೆ ದಾಳಿಮಾಡಿರುವ ಆದಾಯ ತೆರಿಗೆ ಅಧಿಕಾರಿಗಳು, ಇಡೀ ದಿನ ಶೋಧ ನಡೆಸಿದರು. ತೆರಿಗೆ ವಂಚನೆ, ಆದಾಯದ ವಿವರ ಮುಚ್ಚಿಟ್ಟಿರುವುದು ಮತ್ತಿತರ ಅಂಶಗಳನ್ನು ಆಧರಿಸಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.