ಧಾರವಾಡ: ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಆಪ್ತ ಕಾರ್ಯದರ್ಶಿ ಹಾಗೂ ಪಕ್ಷದ ಮುಖಂಡರ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಸಂಜೆ ಏಕಕಾಲಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದರು.
ಆಪ್ತ ಕಾರ್ಯದರ್ಶಿ ಪ್ರಶಾಂತ ಕೇಕರೆ ಅವರ ಸಪ್ತಾಪುರ ಮನೆ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಶಿವಳ್ಳಿ ಅವರಿಗೆ ಸೇರಿದ ಮುರುಘಾಮಠ ಬಳಿ ಕಚೇರಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದರು.
ಜಿಲ್ಲೆ ಪ್ರವೇಶಕ್ಕೆ ನಿರ್ಬಂಧವಿರುವುದರಿಂದ ಕಿತ್ತೂರಿನಲ್ಲಿರುವ ವಿನಯ ಕುಲಕರ್ಣಿ ಅವರೊಂದಿಗೆ ಪ್ರಶಾಂತ ಕೇಕರೆ ಇದ್ದರು. ಮತ್ತೊಂದೆಡೆ ಹೆಬ್ಬಳ್ಳಿಯಲ್ಲಿ ಆಯೋಜನೆಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಚಾರ ಕಾರ್ಯಕ್ಕೆ ಸಿದ್ಧತೆಯಲ್ಲಿ ಈಶ್ವರ ಶಿವಳ್ಳಿ ಇದ್ದ ಸಂದರ್ಭದಲ್ಲಿ ದಾಳಿ ನಡೆದಿದೆ. ಇಬ್ಬರನ್ನೂ ಕರೆಯಿಸಿಕೊಂಡ ಅಧಿಕಾರಿಗಳು ವಿಚಾರಣೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.