ADVERTISEMENT

ಸರ್ಕಾರದಲ್ಲಿ ಪೀಠಾಧಿಪತಿಗಳ ಹಸ್ತಕ್ಷೇಪ ಸಲ್ಲ: ಮುರುಘಾ ಮಠದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2020, 20:00 IST
Last Updated 15 ಜನವರಿ 2020, 20:00 IST

ಹೊಸನಗರ: ‘ಸಮಾಜದ ಪೀಠಾಧಿಪತಿಗಳು ಸರ್ಕಾರದ ಆಡಳಿತಾತ್ಮಕ ವಿಚಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಬಾರದು. ಇದರಿಂದ ರಾಜಕೀಯ ವ್ಯಕ್ತಿಗಳು ಸಾರ್ವಜನಿಕವಾಗಿ ಮುಜುಗರಕ್ಕೀಡಾಗುವ ಅಪಾಯವಿದೆ’ ಎಂದು ಆನಂದಪುರದ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಸದಾನಂದಯೋಗಾಶ್ರಮ ಮೂಲೆಗೆದ್ದೆ ಮಠದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ‘ಅಂತಹ ಸಂದರ್ಭಗಳಲ್ಲಿ ಸಹಜವಾಗಿಯೇ ಅವರು ಒತ್ತಡಕ್ಕೆ ಸಿಲುಕಬಹುದು. ಅಲ್ಲದೇ ಇಂತಹ ಕಾರ್ಯ ಮಠಾಧೀಶರಿಗೆ ಶೋಭೆ ತರುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT