ಬೆಂಗಳೂರು: ‘ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಕೇವಲ ಜನಸಂಪರ್ಕ ಯಾತ್ರೆಯಲ್ಲ; ಆಂದೋಲನ. ಬೆಲೆ ಏರಿಕೆ, ರೈತರ ಸಮಸ್ಯೆ, ಭ್ರಷ್ಟಾಚಾರ, ನಿರುದ್ಯೋಗ, ಕೋಮು ದ್ವೇಷದ ವಿರುದ್ದದ ಈ ನಡಿಗೆ ಹಳ್ಳಿ, ಹಳ್ಳಿಯಲ್ಲೂ ಜನರ ಮನ ಮುಟ್ಟಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವು ನೇರವಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ’ ಎಂದು ಬಣ್ಣಿಸಿದರು.
ಯಾತ್ರೆಯ ಅನುಭವ ಹಂಚಿಕೊಂಡ ಅವರು, ‘ಇಂದಿರಾ ಗಾಂಧಿ ಅವರನ್ನು ನೋಡಲು ಜನ ಹೇಗೆ ನೂಕುನುಗ್ಗಲು ಮಾಡಿಕೊಂಡು ಬರುತ್ತಿದ್ದರೊ, ಅದೇ ರೀತಿ ರಾಹುಲ್ ಗಾಂಧಿ ಅವರನ್ನು ನೋಡಲು ನೂರಾರು ಕಿ. ಮೀ ದೂರದಿಂದ ಮಕ್ಕಳು ತಮ್ಮ ಪೋಷಕರ ಜತೆ ಬಂದಿದ್ದರು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.