ಬಾಳೆಹೊನ್ನೂರು: ಇಲ್ಲಿನ ರಂಭಾಪುರಿ ಪೀಠದಿಂದ ನೀಡುವ ‘ಶ್ರೀ ಜಗದ್ಗುರು ರೇಣುಕಾಚಾರ್ಯ’ ಪ್ರಶಸ್ತಿಗೆ ಮಹಲಿಂಗಪುರದ ಇಬ್ರಾಹಿಂ ಎನ್.ಸುತಾರ ಆಯ್ಕೆಯಾಗಿದ್ದಾರೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಇದೇ 19ರಂದು ನಡೆಯಲಿರುವ ‘ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ₹ 1 ಲಕ್ಷ ನಗದು ಒಳಗೊಂಡಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.