ಗಜೇಂದ್ರಗಡ (ಗದಗ ಜಿಲ್ಲೆ): ‘ತಾವು ದತ್ತಾತ್ರೇಯ ಬ್ರಾಹ್ಮಣ ಎಂದು ಹೇಳಿಕೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ನ ಬೆಂಬಲ ಸೂಚಿಸಿ, ಸಂಸತ್ತಿನಲ್ಲಿ ಮಸೂದೆ ತರುವುದಕ್ಕೆ ಸಹಮತ ವ್ಯಕ್ತಪಡಿಸಲಿ. ಆಗ, ಅವರನ್ನು ಹಿಂದೂ ಎಂದು ಒಪ್ಪಿಕೊಳ್ಳುತ್ತೇನೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
‘ಪ್ರಧಾನಿ ಮೋದಿ ಬಗ್ಗೆ ರಾಹುಲ್ ಪ್ರಶ್ನೆ ಮಾಡುತ್ತಾರೆ. ರಾಹುಲ್ ತಾಯಿ ಕ್ರಿಶ್ಚಿಯನ್. ಕ್ರಿಶ್ಚಿಯನ್ ತಾಯಿಯನ್ನು ಇಟ್ಟುಕೊಂಡು ಅವರಿಗೆ ಹಿಂದೂಗಳ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ’ ಎಂದು ಶೆಟ್ಟರ್ ಪ್ರಶ್ನಿಸಿದರು.
‘ಮೊದಲಿನಿಂದಲೂ ಅಲ್ಪಸಂಖ್ಯಾತರನ್ನು ಓಲೈಸಿಕೊಂಡು ಬಂದಿರುವ ರಾಹುಲ್ಗೆ, ಈಗ ದಿಢೀರನೇ ಹಿಂದೂಗಳ ಮೇಲೆ ಪ್ರೀತಿ ಬಂದಿದೆ’ ಎಂದು ವ್ಯಂಗ್ಯವಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.