ADVERTISEMENT

ಬಾಂಗ್ಲಾ ವಲಸಿಗರಿಂದ ಬಾಂಬ್ ಸ್ಫೋಟ ಶಂಕೆ: ಶೆಟ್ಟರ್‌

ಹುಬ್ಬಳ್ಳಿ ಸ್ಪೋಟ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2019, 15:52 IST
Last Updated 21 ಅಕ್ಟೋಬರ್ 2019, 15:52 IST
   

ಕೊಪ್ಪಳ: ‘ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟದ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ತನಖೆ ನಡೆಸುತ್ತಿದ್ದೇವೆ. ಈ ಹಿಂದೆ ಗೃಹ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ ಅವರಿಗೆ ಬಾಂಗ್ಲಾ ವಲಸಿಗರ ಬಗ್ಗೆ ಹೇಳಿದ್ದೆವು. ವಿಧಾನಸಭೆಯಲ್ಲೂ ಮಾತನಾಡಿದ್ದೇನೆ. ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಇದರ ಪರಿಣಾವನ್ನು ಈಗ ಎದುರಿಸುತ್ತಿದ್ದೇವೆ. ಅವರ ಕೃತ್ಯವೇ ಇರಬಹುದು’ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ಪೋಟದ ಹಿಂದೆ ಯಾರಿದ್ದಾರೆ? ಯಾವ ಕಾರಣಕ್ಕೆ ಆಗಿದೆ ಎನ್ನುವುದು ಪೊಲೀಸ್ ತನಿಖೆಯ ಬಳಿಕ ಹೊರ ಬರಲಿದೆ. ತನಿಖೆಗೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ.ಸತ್ಯಾಂಶವನ್ನು ಶೀಘ್ರ ಜನರ ಮುಂದೆ ಇಡಲಿದ್ದೇವೆ. ಈ ದುರಂತದಲ್ಲಿ ಒಬ್ಬರಿಗೆ ಗಾಯವಾಗಿದ್ದು, ಅಲ್ಲಿಗೆ ಭೇಟಿ ನೀಡಿಯೇ ಇಲ್ಲಿಗೆ ಬರಲು ವಿಳಂಬವಾಯಿತು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.