ADVERTISEMENT

ಸಿದ್ದರಾಮಯ್ಯ ಕಾರಣ ಎಂದು ಹಿಂದೆಯೇ ಹೇಳಿದ್ದೆ: ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2019, 20:03 IST
Last Updated 23 ಆಗಸ್ಟ್ 2019, 20:03 IST
ಜಗದೀಶ ಶೆಟ್ಟರ್
ಜಗದೀಶ ಶೆಟ್ಟರ್   

ಹುಬ್ಬಳ್ಳಿ: ‘ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ ಟೈಂ ಬಾಂಬ್‌ ಫಿಕ್ಸ್‌ ಮಾಡಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದೆ. ಅದನ್ನೇ ಈಗ ಎಚ್‌.ಡಿ.ದೇವೇಗೌಡ ದೃಢಪಡಿಸಿದ್ದಾರೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ ಜತೆ ಸೇರಿ ಮೈತ್ರಿ ಸರ್ಕಾರ ರಚಿಸುವುದು ಸಿದ್ದರಾಮಯ್ಯ ಅವರಿಗೆ ಎಳ್ಳಷ್ಟೂ ಇಷ್ಟವಿರಲಿಲ್ಲ. ತಮ್ಮ ಬೆಂಬಲಿಗರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವ ಮೂಲಕ ಸರ್ಕಾರ ಕೆಡವಿದರು’ ಎಂದು ದೂರಿದರು.

‘ಏಳು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿರುವ ಬಸವರಾಜ ಹೊರಟ್ಟಿ ಅವರೇ ಮಂತ್ರಿಯಾಗಿರಲಿಲ್ಲ. ಅವರ ಭವಿಷ್ಯವೇ ಅವರಿಗೆ ಗೊತ್ತಿಲ್ಲ. ಇನ್ನು ಉಮೇಶ ಕತ್ತಿ ಅವರನ್ನು ಮಂತ್ರಿ ಮಾಡ್ತಾರಾ’ ಎಂದು ವ್ಯಂಗ್ಯವಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.